
ಬೆಂಗಳೂರು(ಜ.09): ರಾಜ್ಯದಲ್ಲಿ ಶುಕ್ರವಾರ ಮತ್ತೆ 50 ಮಂದಿ ಶಾಲಾ ಶಿಕ್ಷಕರು ಹಾಗೂ 20 ಮಂದಿ ಇತರೆ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಶಾಲೆಗಳು ಆರಂಭಗೊಂಡ ಬಳಿಕ ಇದುವರೆಗೆ ಸೋಂಕು ದೃಢಪಟ್ಟಶಿಕ್ಷಕರು ಹಾಗೂ ಸಿಬ್ಬಂದಿ ಸಂಖ್ಯೆ 236ಕ್ಕೆ ಏರಿಕೆಯಾಗಿದೆ.
ಗುರುವಾರದವರೆಗೆ 161 ಶಿಕ್ಷಕರು ಹಾಗೂ ಐವರು ಸಿಬ್ಬಂದಿ ಸೇರಿ ಒಟ್ಟು 166 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿತ್ತು. ಶುಕ್ರವಾರ ಒಟ್ಟು ಸೋಂಕಿತ ಶಿಕ್ಷಕರ ಸಂಖ್ಯೆ 211ಕ್ಕೆ ಹಾಗೂ ಸಿಬ್ಬಂದಿ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಅವರೆಕಾಯಿ ಮೇಳಕ್ಕೆ ಚಾಲನೆ: ಇನ್ನೆಷ್ಟು ದಿನ ಇದೆ..? ಟೈಮಿಂಗ್ಸ್ ಹೀಗಿದೆ
ಸೋಂಕಿತರ ಪೈಕಿ ಅತಿ ಹೆಚ್ಚು ಸೋಂಕು ಬೆಳಗಾವಿ ಜಿಲ್ಲೆಯಲ್ಲಿ ದೃಢಪಟ್ಟಿದೆ. ಅಲ್ಲಿನ ಶಾಲೆಗಳಲ್ಲಿನ 25 ಮಂದಿಗೆ, ಉತ್ತರ ಕನ್ನಡ ಜಿಲ್ಲೆಯಲ್ಲಿ 20 ಮಂದಿಗೆ ಸೋಂಕು ಖಚಿತವಾಗಿದೆ.
ಉಳಿದಂತೆ ಬೆಂಗಳೂರು ನಗರ, ಯಾದಗಿರಿ, ಗದಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮಂಡ್ಯ, ಚಾಮರಾಜ ನಗರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ 10ರಿಂದ 15 ಶಿಕ್ಷಕರು ಹಾಗೂ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ