ವಿದೇಶದಲ್ಲಿ ಕುಡಿದು ಸತ್ತವರ ಸತ್ಯವೂ ತಿಳಿದಿದೆಯಲ್ವೇ?: ಸಿದ್ದುಗೆ ತಿವಿದ ರವಿ!

Published : Oct 19, 2019, 01:45 PM ISTUpdated : Oct 19, 2019, 05:10 PM IST
ವಿದೇಶದಲ್ಲಿ ಕುಡಿದು ಸತ್ತವರ ಸತ್ಯವೂ ತಿಳಿದಿದೆಯಲ್ವೇ?: ಸಿದ್ದುಗೆ ತಿವಿದ ರವಿ!

ಸಾರಾಂಶ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ| ವಿದೇಶದಲ್ಲಿ ಕುಡಿದು ಸತ್ತವರ ಕುರಿತ ಸತ್ಯವನ್ನು ಸಹ ನೀವು ತಿಳಿದು ಮಾತನಾಡುತ್ತೀರಿ ಎಂದು ನಂಬಿದ್ದೇನೆ| ಸಿದ್ದರಾಮಯ್ಯಗೆ ಸಿ. ಟಿ. ರವಿ ಟಾಂಗ್

ಬೆಂಗಳೂರು[ಅ.19]: ವೀರ್‌ ಸಾವರ್ಕರ್‌ಗೆ ಭಾರತ ರತ್ನ ನೀಡುವ ಸಂಬಂಧ ಸಚಿವ ಸಿ. ಟಿ. ರವಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಆರಂಭವಾದ ಟ್ವೀಟ್ ವಾರ್ ಜೋರಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇಬ್ಬರು ನಾಯಕರ ಮಾತಿನ ಚಕಮಕಿ ಭಾರೀ ಸೌಂಡ್ ಮಾಡುತ್ತಿದೆ.

"

ಹೌದು ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿ ಅಮಾಯಕರನ್ನು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂದು ತಿವಿದಿದ್ದ ಸಿದ್ದರಾಮಯ್ಯಗೆ ಸಚಿವ ಸಿ. ಟಿ. ರವಿ ತಿರುಗೇಟು ನೀಡಿದ್ದು, ವಿದೇಶದಲ್ಲಿ ಕುಡಿದು ಸತ್ತವರ ಕುರಿತ ಸತ್ಯವನ್ನು ಸಹ ನೀವು ತಿಳಿದು ಮಾತನಾಡುತ್ತೀರಿ ಎಂದು ತಿರುಗೇಟು ನೀಡಿದ್ದಾರೆ.

'ಅಧಿಕಾರ ಇಲ್ಲದಾಗ ಕಂಠಪೂರ್ತಿ ಕುಡಿದು ಅಮಾಯಕರನ್ನು ಸಾಯಿಸ್ತಾರೆ'

'ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ!' ಎಂದಿದ್ದ ಸಿದ್ದರಾಮ್ಯಯಗೆ ಟಾಂಗ್ ನೀಡಿರುವ ಸಿ. ಟಿ. ರವಿ 'ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅಂತ ಮಹಾ ಕ್ರೂರಿಗಳ ಇತಿಹಾಸ ಓದುವ ನಡುವೆ ವಿದೇಶದಲ್ಲಿ ಕುಡಿದು ಸತ್ತವರ ಕುರಿತ ಸತ್ಯವನ್ನು ಸಹ ನೀವು ತಿಳಿದು ಮಾತನಾಡುತ್ತೀರಿ ಎಂದು ನಂಬಿದ್ದೇನೆ’ ಎಂದಿದ್ದಾರೆ.

'ಸಾವರ್ಕರ್‌ಗೆ ಆಮೇಲೆ ಕೊಡುವಿರಂತೆ, ಮೊದಲು ಸಿದ್ದಗಂಗಾ ಶ್ರೀಗೆ ಭಾರತರತ್ನ ನೀಡಿ'

ಮಹಾತ್ಮ ಗಾಂಧಿ ಹತ್ಯೆಗೆ ಸ್ಕೆಚ್‌ (ರೂಪರೇಷೆ) ಸಿದ್ಧಪಡಿಸಿದವರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌ಗೆ ಭಾರತ ರತ್ನ ನೀಡುತ್ತಾರೆ. ಹಾಗಾದ್ರೆ ಗಾಂಧಿ ಕೊಲೆ ಮಾಡಿರುವ ನಾಥೂರಾಮ್‌ ಗೋಡ್ಸೆಗೂ ಭಾರತ ರತ್ನ ಕೊಡಲಿ ಎಂಬಲ್ಲಿಂದ ಆರಂಭವಾದ ಈ ಟ್ವೀಟ್ ವಾರ್ ಜೋರಾಗುತ್ತಿದ್ದು, ಮುಂದೆ ಯಾವ ತಿರುವು ಪಡೆಯುತ್ತೆ ಕಾದು ನೋಡಬೇಕಷ್ಟೇ

ಗೋಡ್ಸೆಗೂ ಭಾರತರತ್ನ ಕೊಡಿ: ಸಿದ್ದರಾಮಯ್ಯ ವಿವಾದ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್