
ತುಮಕೂರು (.31): ಕೆಎನ್ ರಾಜಣ್ಣ ಅವರ ಸಚಿವ ಸ್ಥಾನದಿಂದ ವಜಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ 15ಕ್ಕೂ ಹೆಚ್ಚು ವಿವಿಧ ಮಠಗಳ ಸ್ವಾಮೀಜಿಗಳು ತುಮಕೂರಿನ ಕ್ಯಾತಸಂದ್ರದಲ್ಲಿರುವ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಮೂಲಕ 'ನಾವು ನಿಮ್ಮೊಂದಿಗೆ ಇದ್ದೇವೆ' ಎಂಬ ಸಂದೇಶವನ್ನು ಸ್ವಾಮೀಜಿಗಳು ರಾಜಣ್ಣ ಅವರಿಗೆ ಸೂಚಿಸಲಿದ್ದಾರೆ.
ಕೆ.ಎನ್. ರಾಜಣ್ಣ ಅವರಿಗೆ ಸಚಿವ ಸ್ಥಾನವನ್ನು ಮರಳಿ ನೀಡಬೇಕೆಂದು ಹೈಕಮಾಂಡ್ ನಾಯಕರ ಮನವೊಲಿಕೆಗೆ ಸ್ವಾಮೀಜಿಗಳು ಮುಂದಾಗಿದ್ದಾರೆ. ಈ ಭೇಟಿಯ ನಂತರ ಸ್ವಾಮೀಜಿಗಳು ಸುದ್ದಿಗೋಷ್ಠಿಯನ್ನು ಆಯೋಜಿಸಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆ.
ಇದನ್ನೂ ಓದಿ: ಬಿಹಾರ ಯಾತ್ರೆಯಲ್ಲಿ ಸಿಎಂ, ಡಿಸಿಎಂ ಪವರ್ ಪಾಲಿಟಿಕ್ಸ್; ರಾಹುಲ್ ಗಾಂಧಿ ಮುಂದೆ ತಕ್ಕಡಿ ತೂಗೋ ಆಟ ಜೋರು!
ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹಿಂದುಳಿದ ಜಾತಿ ಮತ್ತು ಸಮುದಾಯಗಳ ಮಠಾಧೀಶರು ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದ್ದರು. ಇದೀಗ ಕೆ.ಎನ್. ರಾಜಣ್ಣ ಅವರಿಗೆ ಬೆಂಬಲ ಸೂಚಿಸಲು ಮತ್ತು ಅವರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಲು ಸ್ವಾಮೀಜಿಗಳು ಒಗ್ಗಟ್ಟಾಗಿ ಮುಂದಾಗಿದ್ದಾರೆ.
ಈ ಘಟನೆಯು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಬೆಳವಣಿಗೆಗಳು ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿವೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ