ತುಮಕೂರು: ಮುಲ್ಲಾನ ಹಿಂಸೆ ತಾಳಲಾರದೆ ಬರೋಬ್ಬರಿ 24 ಮಕ್ಕಳು ಎಸ್ಕೇಪ್! ಬೆಂಗಳೂರಲ್ಲಿ ಬಯಲಾಯ್ತು ಬೆಚ್ಚಿಬೀಳಿಸೋ ಸತ್ಯ!

Published : May 12, 2026, 12:44 PM IST
Tumakuru Madrasa Horror FIR Registered Against Maulvi for Physical and Mental Abuse of Children

ಸಾರಾಂಶ

ತುಮಕೂರಿನ ಮದರಸಾದಲ್ಲಿ ಮೌಲ್ವಿಯೊಬ್ಬನ ನಿರಂತರ ಕಿರುಕುಳ ಮತ್ತು ದೈಹಿಕ ಹಿಂಸೆಯಿಂದ ಬೇಸತ್ತು 24 ಮಕ್ಕಳು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ಬಳಿಕ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಈ ಮಕ್ಕಳ ಹೇಳಿಕೆ ಆಧರಿಸಿ, ಮೌಲ್ವಿ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತುಮಕೂರು (ಮೇ.12):ತುಮಕೂರು ಮದರಸಾದಲ್ಲಿ ಮೌಲ್ವಿಯಿಂದ ನಿರಂತರ ಕಿರುಕುಳಕ್ಕೆ ಹೆದರಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದ 24 ಮಕ್ಕಳು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಘಟನೆಯ ಮಾಹಿತಿ ಪಡೆದ ರೈಲ್ವೆ ಪೊಲೀಸರೇ ಶಾಕ್ ಆಗಿದ್ದಾರೆ.

ಮದರಸ ಒಳಗೆ ನಡೆದಿದ್ದೇನು?

ತುಮಕೂರಿನ ಮದರಸಾದಲ್ಲಿ ನಡೆದ ಈ ಘಟನೆಯಿಂದ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ. ಬಿಹಾರ ಮೂಲದ 24 ಮಕ್ಕಳು ತುಮಕೂರಿನ ಅಮ್ಲಾಪುರದಲ್ಲಿರುವ ಜಾಮಿಯಾ ಅರೇಬಿಯಾ ಹಸೀನಿಯಾ ಟ್ರಸ್ಟ್ ಮದರಸಾದಲ್ಲಿ ಓದಲು ಇದ್ದರು. ಆದರೆ ಅಲ್ಲಿನ ಪರಿಸ್ಥಿತಿ ಹೇಗಿತ್ತೆಂದರೆ ಮೌಲ್ವಿಯ ಕಿರುಕುಳ ತಾಳಲಾರದೆ ಒಂದಲ್ಲ ಎರಡಲ್ಲ ಬರೊಬ್ಬರಿ ಇಪ್ಪತ್ನಾಲ್ಕು ಮಕ್ಕಳು ರಾತ್ರಿ ವೇಳೆ ಮದರಸಾದಿಂದ ತಪ್ಪಿಸಿಕೊಂಡಿದ್ದಾರೆ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಪತ್ತೆ

ಮದರಸಾದಿಂದ ತಪ್ಪಿಸಿಕೊಂಡ ಆ ಮಕ್ಕಳು ಬಳಿಕ ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮಕ್ಕಳನ್ನು ಗಮನಿಸಿದ ರೈಲ್ವೇ ರಕ್ಷಣಾ ದಳ ವಿಚಾರಿಸಿದಾಗ ಬೆಚ್ಚಿಬೀಳಿಸುವ ಸಂಗತಿಗಳು ಹೊರಬಂದಿವೆ.

ಮದರಸಾದ ಮೌಲ್ವಿ ಮೌಲಾಲಿ ಎಂಥ ಕ್ರೂರನೆಂದರೆ ಓದಲು ಬಂದ ಮಕ್ಕಳಿಂದ ಕಲ್ಲು ಹೊರೆಸಿಸುತ್ತಿದ್ದನೆಂದು ಮಕ್ಕಳು ಆರೋಪಿಸಿದ್ದಾರೆ. ದಿನಾ ಕಲ್ಲು ಮಣ್ಣು ಹೊರಿಸುತ್ತಿದ್ದರು. ಕೆಲಸ ಮಾಡಲು ಆಗೋದಿಲ್ಲ ಎಂದರೆ ಹಿಗ್ಗಾಮುಗ್ಗಾ ಥಳಿಸಿ ಹಿಂಸೆ ನೀಡುತ್ತಿದ್ದನಂತೆ ಮೌಲ್ವಿ. ಇದಕ್ಕಿಂತಲೂ ಶಾಕಿಂಗ್ ಅಂದ್ರೆ, ಕೆಲವೊಮ್ಮೆ ಮಕ್ಕಳಿಗೆ ಸರಿಯಾಗಿ ಊಟ ಕೂಡ ಕೊಡುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ದೈಹಿಕ ಹಿಂಸೆ, ಕಿರುಕುಳ, ಬಲವಂತದ ಕೆಲಸಗಳಿಂದ ಬೇಸತ್ತ ಮಕ್ಕಳು ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರೆ ಎನ್ನಲಾಗಿದೆ.

ಈ ವಿಚಾರ ಮಕ್ಕಳ ಕಲ್ಯಾಣ ಸಮಿತಿ (CWC) ಗಮನಕ್ಕೆ ಬಂದ ಬಳಿಕ ಪ್ರಕರಣ ತುಮಕೂರಿಗೆ ವರ್ಗಾವಣೆಯಾಗಿದೆ. ಇದೀಗ ಮೌಲ್ವಿ ಮೌಲಾಲಿ ವಿರುದ್ಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇನ್ನೂ ಮದರಸಾದ ಒಳಗೆ ಏನೇನು ನಡೆದಿತ್ತು? ಮಕ್ಕಳ ಹೇಳಿಕೆಯಲ್ಲಿ ಇನ್ನೇನು ಹೊರಬೀಳಬಹುದು? ತನಿಖೆ ಬಳಿಕ ಬಯಲಿಗೆ ಬರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜಿಲೆಟಿನ್ ಕಡ್ಡಿ ಮಾತ್ರವಲ್ಲ, ಮೋದಿ ಬರುವ ಮಾರ್ಗದಲ್ಲೇ ಟೈಮರ್ ಪತ್ತೆ! ಉಗ್ರ ಸಂಚಿನ ಬಗ್ಗೆ ಗೃಹ ಸಚಿವ ಅಚ್ಚರಿ ಹೇಳಿಕೆ!
ತಂಪು ತೋರಿಸಿ ಟಾರ್ಚರ್ ಶುರು ಮಾಡಿದ ಬಿಸಿಲು! ಬೆಂಗಳೂರಲ್ಲಿ ಮತ್ತೆ ಹೀಟ್ ಅಲರ್ಟ್! ಹವಾಮಾನ ಇಲಾಖೆ ಎಚ್ಚರಿಕೆ ಏನು?