ಬೆಂಗಳೂರಲ್ಲಿ ವಿದ್ಯಾರ್ಥಿನಿಯರ ಮೇಲೆ ಬೀದಿ ನಾಯಿ ದಾಳಿ, ಕೈ, ಕಾಲು ಕಚ್ಚಿ ಗಂಭೀರ ಗಾಯ!

Ravi Janekal   | Kannada Prabha
Published : Aug 13, 2025, 07:45 AM IST
stray dog

ಸಾರಾಂಶ

ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ವಾಯುವಿಹಾರಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ಹಿಂಡು ದಾಳಿ ನಡೆಸಿ ಗಾಯಗೊಳಿಸಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು (ಆ.13): ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿ ಮುಂದುವರೆದಿದ್ದು, ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ವಾಯುವಿಹಾರಕ್ಕೆ ಆಗಮಿಸಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಶ್ವಾನಗಳ ಹಿಂಡು ದಾಳಿ ಮಾಡಿ ಗಾಯಗೊಳಿಸಿದೆ.

ಬೆಳಗ್ಗೆ 7 ಗಂಟೆ ವೇಳೆ ವಾಯುವಿಹಾರಕ್ಕೆಂದು ಬಂದಿದ್ದ ಅಂಬೇಡ್ಕರ್ ಸ್ಕೂಲ್ ಆಫ್‌ ಎಕಾನಾಮಿಕ್ಸ್ ನ ಎಂಎಸ್ಸಿ 3ನೇ ವರ್ಷದ ನಿಕ್ಷಿತಾ ಮತ್ತು ಸೌಜನ್ಯಾ ಎಂಬ ವಿದ್ಯಾರ್ಥಿಗಳ ಮೇಲೆ ಬೀದಿನಾಯಿಗಳು ದಾಳಿ ಮಾಡಿವೆ. ಈ ವೇಳೆ ವಿದ್ಯಾರ್ಥಿನಿಯರ ಕೈ ಹಾಗೂ ಕಾಲಿನ ವಿವಿಧ ಭಾಗಕ್ಕೆ ಕಚ್ಚಿ ಗಾಯಗೊಳಿಸಿವೆ. ತಕ್ಷಣ ಭದ್ರತಾ ಸಿಬ್ಬಂದಿ ಸೇರಿ ಸಾರ್ವಜನಿಕರು ವಿದ್ಯಾರ್ಥಿನಿಯರ ನೆರವಿಗೆ ಧಾವಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರೂ ವಿದ್ಯಾರ್ಥಿನಿಯರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಿ ಮಂಗಳವಾರ ಸಂಜೆ ವೇಳೆ ಸಾಮಾನ್ಯ ಕೊಠಡಿಗೆ ಸ್ಥಳಾಂತರಿಸಲಾಗಿದೆ.

ಇಂದು ನಾಯಿ ಸೆರೆ:

ಸುಮಾರು 10 ರಿಂದ 12 ಬೀದಿ ನಾಯಿಗಳು ದಾಳಿ ನಡೆಸಿವೆ ಎಂದು ತಿಳಿದು ಬಂದಿದ್ದು, ಅವು ಸ್ಥಳೀಯ ಬೀದಿ ನಾಯಿಗಳಾಗಿವೆ. ಬೆಂಗಳೂರು ವಿವಿ ಆವರಣ ದೊಡ್ಡದಾಗಿರುವುದರಿಂದ ಬೀದಿ ನಾಯಿಗಳನ್ನು ಸೆರೆ ಹಿಡಿಯುವುದು ಕಷ್ಟವಾಗಿದ್ದು, ಬುಧವಾರ ಸೂಕ್ತ ವ್ಯವಸ್ಥೆ ಮಾಡಿಕೊಂಡು ಕಾರ್ಯಾಚರಣೆ ನಡೆಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ವೆಂಕಟೇಶ್‌ ತಿಳಿಸಿದ್ದಾರೆ.

ಕಳೆದ ಎರಡು ವಾರದ ಹಿಂದೆ ಬೀದಿ ನಾಯಿಗಳ ದಾಳಿಯಿಂದ ವೃದ್ದ ಸೀತಪ್ಪ ಎಂಬುವವರು ಮೃತಪಟ್ಟಿದ್ದರು. ಆ ಬಳಿಕ ಜೆ.ಪಿ.ನಗರದಲ್ಲಿ ಮೂರು ವರ್ಷದ ಮಗುವಿನ ಮೇಲೆ ದಾಳಿಯಾಗಿತ್ತು. ದಾಳಿ ಮಾಡಿದ ನಾಯಿಯಲ್ಲಿ ರೇಬಿಸ್‌ ಅಂಶ ಪತ್ತೆಯಾಗಿ ಆತಂಕ ಮೂಡಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!