7 ಜಿಲ್ಲೆಗಳಲ್ಲಿ ಉತ್ತಮ ಮಳೆ: ಸಿಡಿಲಿಗೆ ತಾಯಿ, ಪುತ್ರಿ ಬಲಿ

Kannadaprabha News   | Asianet News
Published : Jul 12, 2021, 07:27 AM IST
7 ಜಿಲ್ಲೆಗಳಲ್ಲಿ ಉತ್ತಮ ಮಳೆ: ಸಿಡಿಲಿಗೆ ತಾಯಿ, ಪುತ್ರಿ ಬಲಿ

ಸಾರಾಂಶ

* ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಉತ್ತಮ ಮಳೆ * ಸಿಡಿಲು ಬಡಿದು ಹೊಲದಲ್ಲಿದ್ದ ಇಬ್ಬರು ಮಹಿಳೆಯರ ದುರ್ಮರಣ * ಶಿವಮೊಗ್ಗ ಜಿಲ್ಲೆಗಳಲ್ಲಿ ದಿನವಿಡೀ ಸಾಧಾರಣ ಮಳೆ

ಬೆಂಗಳೂರು(ಜು.12): ರಾಜ್ಯದ ಕರಾವಳಿ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಭಾನುವಾರವೂ ಮಳೆ ಮುಂದುವರಿದಿದ್ದು, ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಸಿಡಿಲು ಬಡಿದು ತಾಯಿ-ಮಗಳು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಉತ್ತಮ ಮಳೆಯಾಗಿದ್ದರೆ, ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ದಿನವಿಡೀ ಸಾಧಾರಣ ಮಳೆಯಾಗಿದೆ. ಇನ್ನು ಬೆಳಗಾವಿ, ಬೀದರ್‌ ಜಿಲ್ಲೆಯಲ್ಲಿ ಕೆಲ ಗಂಟೆಗಳ ಕಾಲ ಮಳೆ ಸುರಿದಿದೆ.

ಭಾರೀ ಮಳೆ : ಹಳ್ಳದಲ್ಲಿ ಬೈಕ್‌ ಸಮೇತ ಕೊಚ್ಚಿ ಹೋದ ದಂಪತಿ

ಬೀದರ್‌ನ ಭಾಲ್ಕಿ ತಾಲೂಕಿನ ಖುದಾವನಪೂರ ಗ್ರಾಮದಲ್ಲಿ ಹೊಲದಲ್ಲಿದ್ದಲ ಹೊಲದಲ್ಲಿದ್ದ ರೈತ ಮಹಿಳೆ ಭಾಗ್ಯಶ್ರೀ ಭೀಮರಾವ್‌ ಮೆತ್ರೆ (32) ಮತ್ತು ಪುತ್ರಿ ವೈಶಾಲಿ ಮೇತ್ರೆ (9) ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಳೆದೆರಡು ದಿನಗಳಿಂದ ಉತ್ತಮ ಮಳೆ ಕಾಣುತ್ತಿರುವ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ