
ಬೆಂಗಳೂರು (ಮೇ.08): ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ (Rain) ಆರ್ಭಟಿಸಿದ್ದು, ಮಳೆ ಸಂಬಂಧಿ ಕಾರಣಗಳಿಗೆ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ (Death). ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿತ್ರದುರ್ಗ, ಕೊಪ್ಪಳ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಚಿತ್ರದುರ್ಗ ಹಾಗೂ ಕೊಪ್ಪಳದಲ್ಲಿ ಸಿಡಿಲು ಬಡಿದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಕುರಿ ಮೇಯಿಸಲು ತೆರಳಿದ್ದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೇವರೆಡ್ಡಿಹಳ್ಳಿ ಗ್ರಾಮದ ಯಶವಂತ್ (19) ಸಿಡಿಲಿಗೆ ಬಲಿಯಾಗಿದ್ದಾನೆ. ಚಳ್ಳಕೆರೆ ತಹಸೀಲ್ದಾರ್ ಎನ್.ರಘುಮೂರ್ತಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇನ್ನು ಚಿತ್ರದುರ್ಗ ಜಿಲ್ಲೆಯ ಹಲವೆಡೆ ಮಿಂಚು-ಗುಡುಗು ಸಹಿತ ಮಳೆಯಾಗಿದೆ. ಹಿರಿಯೂರಿನಲ್ಲಿ ಕಳೆದ ಒಂದು ಗಂಟೆಯಿಂದ ಆಲಿಕಲ್ಲು ಮಳೆಯಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮಳೆ ನೀರಿನಿಂದ ರಸ್ತೆ ಚರಂಡಿ ತುಂಬಿ ಹರಿದಿದೆ. ಅಲ್ಲದೇ ತೋಟಗಳಲ್ಲಿ ಮಳೆ ನೀರು ತುಂಬಿ ನಿಂತಿದ್ದು, ಅಡಿಕೆ ಮರಗಳು ಧರೆಗೆ ಉರುಳಿದೆ. ಕೊಪ್ಪಳದಲ್ಲೂ ಸಿಡಿಲಿಗೆ ವ್ಯಕ್ತಿ ಬಲಿಯಾಗಿದ್ದು, ತಾಲೂಕಿನ ಇಂದರಗಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಇಂದರಗಿ ಗ್ರಾಮದ ನಿವಾಸಿ ಶಿವಪ್ಪ ಕಾಸನಕಂಡಿ (60) ಮಳೆ ಗಾಳಿ ಹಿನ್ನೆಲೆಯಲ್ಲಿ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ