ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಗೆ ಗರ್ಭಿಣಿ ಸೇರಿ ಇಬ್ಬರು ಬಲಿ

Published : May 28, 2024, 11:56 AM IST
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಗೆ ಗರ್ಭಿಣಿ ಸೇರಿ ಇಬ್ಬರು ಬಲಿ

ಸಾರಾಂಶ

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಪಟ್ಟಣದಲ್ಲಿ ಬಿರುಗಾಳಿ ಮಳೆಗೆ ಮರ ಬಿದ್ದು ಗರ್ಭಿಣಿ ಶ್ವೇತಾ ರಾಠೋಡ ಎಂಬುವರು ಮೃತಪಟ್ಟಿದ್ದಾರೆ. ಕುಡಿಯಲು ನೀರು ತರಲು ಹೋದ ಸಂದರ್ಭದಲ್ಲಿ ಬಿರುಗಾಳಿಗೆ ಅವರ ಮೈಮೇಲೆ ಮರ ಬಿತ್ತು. ಇದೇ ವೇಳೆ, ಸುರಪುರ ತಾಲೂಕಿನ ಹಲವೆಡೆ ಸುರಿದ ಬಿರುಗಾಳಿ ಸಹಿತ ಮಳೆಗೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. 

ಬೆಂಗಳೂರು(ಮೇ.28):  ಕಲಬುರಗಿ, ಯಾದಗಿರಿ ಸೇರಿ ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೋಮವಾರವೂ ಮಳೆಯಾಗಿದ್ದು, ಮಳೆ ಸಂಬಂಧಿ ದುರ್ಘಟನೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಪಟ್ಟಣದಲ್ಲಿ ಬಿರುಗಾಳಿ ಮಳೆಗೆ ಮರ ಬಿದ್ದು ಗರ್ಭಿಣಿ ಶ್ವೇತಾ ರಾಠೋಡ (22) ಎಂಬುವರು ಮೃತಪಟ್ಟಿದ್ದಾರೆ. ಕುಡಿಯಲು ನೀರು ತರಲು ಹೋದ ಸಂದರ್ಭದಲ್ಲಿ ಬಿರುಗಾಳಿಗೆ ಅವರ ಮೈಮೇಲೆ ಮರ ಬಿತ್ತು. ಇದೇ ವೇಳೆ, ಸುರಪುರ ತಾಲೂಕಿನ ಹಲವೆಡೆ ಸುರಿದ ಬಿರುಗಾಳಿ ಸಹಿತ ಮಳೆಗೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. 

ಭೀಕರ ಬರದಿಂದ ಕಂಗೆಟ್ಟಿದ್ದ ಜನತೆಗೆ ಸಂತಸದ ಸುದ್ದಿ: ಈ ಸಲ ವಾಡಿಕೆಗಿಂತ ಹೆಚ್ಚು ಮಳೆ

ಈ ಮಧ್ಯೆ, ಕಲಬುರಗಿ ಜಿಲ್ಲೆ ಯಡ್ರಾಮಿ ತಾಂಡಾ ಹೊರವಲಯದಲ್ಲಿ ಬಿರುಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಪಕ್ಕದ ಸುಂಬಡ ಗ್ರಾಮದ ಚಂದ್ರಮಪ್ಪ ಮಾದರ (24) ಎಂಬುವರು ಮೃತಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Breaking News: ಕೋಮುದ್ವೇಷ ಭಾಷಣ ಆರೋಪ: ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್‌ಐಆರ್!
ಚಾಮರಾಜನಗರ: ಪಾದಯಾತ್ರೆಗೆ ಹೋರಟಿದ್ದವರ ಮೇಲೆ ಚಿರತೆ ಅಟ್ಯಾಕ್, ಮಾದಪ್ಪ ಭಕ್ತ ಸಾವು!