
ವಿಜಯನಗರ (ಅ.24): ಇಡೀ ದೇಶವೇ ಇಂದು ವಿಜಯದಶಮಿ ಸಂಭ್ರಮದಲ್ಲಿದೆ. ಹೀಗಿರುವಾಗ ವಿಜಯನಗರ ಜಿಲ್ಲೆಯಲ್ಲೊಂದು ಎರಡು ಕಾಲಿನ ಕರುವೊಂದು ಜನಿಸಿದ್ದು, ಇದು ಪರಶಿವನ ಪುನರ್ಜನ್ಮವೆಂದು ಪೂಜಿಸಲು ಮುಂದಾಗಿದ್ದಾರೆ.
ವಿಜಯ ದಶಮಿಯ ದಿನದಂದೇ ಅಪರೂಪದ ಕರು ಜನನವಾಗಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹಾರಕಬಾವಿ ಗ್ರಾಮದಲ್ಲಿ ವಿಚಿತ್ರ ಕರು ಜನನವಾಗಿದೆ. ಎರಡು ಕಾಲುಗಳು ಇರುವ ವಿಶೇಷ ಕರು ಇದಾಗಿದ್ದು, ಆರೋಗ್ಯವಾಗಿದೆ. ಹಡಪದ ಬಸವಣ್ಣನವರ ಮನೆಯಲ್ಲಿ ಜನಿಸಿದ ಕರುವನ್ನು ನೋಡಲು ಜನರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ಇನ್ನು ಈ ಕರು ಪರಶಿವನ ಪುನರ್ಜನ್ಮ ಎಂದು ಜನರು ಭಾವಿಸಿ ಪೂಜಿಸುತ್ತಿದ್ದಾರೆ. ಈ ವಿಶೇಷ ಕರುವನ್ನು ನೋಡಲು ಮತ್ತು ಪೂಜೆ ಮಾಡಲು ತಂಡೋಪ ತಂಡವಾಗಿ ಬರಯತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ