ಇನ್ನೂ ಎರಡು ಪುಣ್ಯ ಕ್ಷೇತ್ರಗಳು ಶೀಘ್ರ ಮಸೀದಿ ಮುಕ್ತ: ಈಶ್ವರಪ್ಪ

Published : Mar 01, 2024, 11:04 AM IST
ಇನ್ನೂ ಎರಡು ಪುಣ್ಯ ಕ್ಷೇತ್ರಗಳು ಶೀಘ್ರ ಮಸೀದಿ ಮುಕ್ತ: ಈಶ್ವರಪ್ಪ

ಸಾರಾಂಶ

ದೇಶದಲ್ಲಿ ಹಿಂದುಗಳ ಅವಿರತ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಅದೇ ಮಥುರಾ, ಕಾಶಿಯನ್ನು ಮಸೀದಿಯಿಂದ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ 

ಶಿಕಾರಿಪುರ(ಮಾ.01):  ಅಯೋಧ್ಯೆಯಲ್ಲಿ ಇದೀಗ ರಾಮಮಂದಿರ ನಿರ್ಮಾಣವಾಗಿದೆ. ಮುಂದೆ ಇನ್ನೂ ಎರಡು ಪುಣ್ಯ ಕ್ಷೇತ್ರವನ್ನು ಮಸೀದಿ ಮುಕ್ತ ಮಾಡಲಿದ್ದೇವೆ, ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. 

ಗುರುವಾರ ಪಟ್ಟಣದ ಹಳೇಸಂತೆ ಮೈದಾನದ ಬಳಿಯಿರುವ ಶ್ರೀ ಮಾರಿಕಾಂಬ ಬಯಲು ರಂಗ ಮಂದಿರದಲ್ಲಿ ಬಿಜೆಪಿ ವತಿಯಿಂದ ನಡೆದ ಹಿಂದುಳಿದ ವರ್ಗಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಹಿಂದುಗಳ ಅವಿರತ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಅದೇ ಮಥುರಾ, ಕಾಶಿಯನ್ನು ಮಸೀದಿಯಿಂದ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. 

ಮೋದಿ 3ನೇ ಬಾರಿ ಪ್ರಧಾನಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿ.ವೈ.ವಿಜಯೇಂದ್ರ

ಈಗಾಗಲೇ ಸುಪ್ರೀಂ ಕೋರ್ಟಿನ ತೀರ್ಪು 1 ದೇಶದ ಹಿಂದುಗಳ ಪರವಾಗಿದ್ದು, ಈ ಎರಡೂ ಪುಣ್ಯ ಕ್ಷೇತ್ರಗಳು ಮಸೀದಿ ಮುಕ್ತವಾಗುವುದು ಶತಃಸಿದ್ಧ ಎಂದರು. ಕನಕದಾಸರು ಹಿಂದೂ ಸಮಾಜವನ್ನು ಒಗ್ಗೂಡಿಸಿಕೊಂಡು ಹೋದ ಮಹಾನ್ ಮಾನವತಾವಾದಿ. ಅವರ ಹೆಸರಿನಲ್ಲೂ ರಾಜಕಾರಣ ಕಾಂಗ್ರೆಸ್ಸಿಗರು ಜಾತಿ ಮಾಡುತ್ತಿರುವುದು ಶೋಚನಿಯ. ಈ ಚುನಾವಣೆ ಮೂಲಕ ಮೋದಿ ಅವರನ್ನು ಮತ್ತೆ ಪ್ರಧಾನಿಯಾಗಿಸುವ ಮೂಲಕ ಧರ್ಮ, ದೇಶ ಉಳಿಸಬೇಕು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಆರ್ಭಟಕ್ಕೆ ಮದ್ಯ ಮಾರಾಟವೇ ಕುಸಿತ!
ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: ಸಿಎಂ ಬಗ್ಗೆ ಸಚಿವ ಬೈರತಿ ಸುರೇಶ್ ಗುಣಗಾನ