6 ಬೋಗಿಗಳ ಮತ್ತೆರಡು ಮೆಟ್ರೋ ರೈಲಿಗೆ ಚಾಲನೆ

Published : Oct 29, 2019, 08:21 AM IST
6 ಬೋಗಿಗಳ ಮತ್ತೆರಡು ಮೆಟ್ರೋ ರೈಲಿಗೆ ಚಾಲನೆ

ಸಾರಾಂಶ

ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ (ಯಲಚೇನಹಳ್ಳಿ-ನಾಗಸಂದ್ರ ಮಾರ್ಗ) ಆರು ಬೋಗಿಗಳ ಎರಡು ಮೆಟ್ರೋ ರೈಲುಗಳಿಗೆ ಸೋಮವಾರ ಚಾಲನೆ ನೀಡಲಾಗಿದೆ. ದಟ್ಟಣೆ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ಇದೀಗ ಪುನಃ ಎರಡು ಮೆಟ್ರೋ ರೈಲನ್ನು ಆರು ಬೋಗಿಗಳ ರೈಲುಗಳಾಗಿ ಪರಿವರ್ತಿಸಲಾಗಿದೆ. ಹೀಗೆ ಒಟ್ಟು ಆರು ಬೋಗಿಗಳ ನಾಲ್ಕು ಮೆಟ್ರೋ ರೈಲುಗಳು ಕಾರ್ಯಾಚರಣೆಗೆ ಬಿಡಲಾಗಿದೆ.

ಬೆಂಗಳೂರು(ಅ.29): ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ (ಯಲಚೇನಹಳ್ಳಿ-ನಾಗಸಂದ್ರ ಮಾರ್ಗ) ಆರು ಬೋಗಿಗಳ ಎರಡು ಮೆಟ್ರೋ ರೈಲುಗಳಿಗೆ ಸೋಮವಾರ ಚಾಲನೆ ನೀಡಲಾಗಿದೆ.

ಸೋಮವಾರ ಬೆಳಗ್ಗೆ 6 ಗಂಟೆಗೆ ಹಸಿರು ಮಾರ್ಗದ ನಾಗಸಂದ್ರ ಮೆಟ್ರೋ ರೈಲು ನಿಲ್ದಾಣದಲ್ಲಿ ಆರು ಬೋಗಿಯ ಎರಡು ಮೆಟ್ರೋ ರೈಲುಗಳಿಗೆ ಬಿಎಂಆರ್‌ಸಿಎಲ್‌ ಅಧಿಕಾರಿಗಳೇ ಚಾಲನೆ ನೀಡಿದ್ದಾರೆ. ಈಗಾಗಲೇ ಹಸಿರು ಮಾರ್ಗದಲ್ಲಿ ಆರು ಬೋಗಿಯ ಎರಡು ಮೆಟ್ರೋ ರೈಲುಗಳು ಸಂಚರಿಸುತ್ತಿವೆ. ದಟ್ಟಣೆ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ಇದೀಗ ಪುನಃ ಎರಡು ಮೆಟ್ರೋ ರೈಲನ್ನು ಆರು ಬೋಗಿಗಳ ರೈಲುಗಳಾಗಿ ಪರಿವರ್ತಿಸಲಾಗಿದೆ. ಹೀಗೆ ಒಟ್ಟು ಆರು ಬೋಗಿಗಳ ನಾಲ್ಕು ಮೆಟ್ರೋ ರೈಲುಗಳು ಕಾರ್ಯಾಚರಣೆಗೆ ಬಿಡಲಾಗಿದೆ.

ಹಸಿರು ಮಾರ್ಗದಲ್ಲಿ ದಟ್ಟಣೆ ಸಮಯದಲ್ಲಿ 10ರಿಂದ 11 ಸಾವಿರ ಮಂದಿ ಪ್ರಯಾಣಿಸುತ್ತಾರೆ. ವಿಶೇಷ ದಿನಗಳಂದು ಈ ಸಂಖ್ಯೆಯು 13ರಿಂದ 14 ಸಾವಿರಕ್ಕೂ ಅಧಿಕಗೊಳ್ಳುತ್ತದೆ. ಈ ಮಾರ್ಗದಲ್ಲಿ ದಿನಕ್ಕೆ 1.30 ಲಕ್ಷದಿಂದ 1.60 ಲಕ್ಷ ಮಂದಿ ಪ್ರಯಾಣಿಸುತ್ತಾರೆ ಎಂದು ಬಿಎಂಆರ್ ಸಿಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏರ್ಪೋರ್ಟ್‌ಗೆ ಮೆಟ್ರೋ : ಕೇಂದ್ರದ ಜತೆಗೆ ತೇಜಸ್ವಿ ಸೂರ‍್ಯ ಸಮಾಲೋಚನೆ

ಮೈಸೂರು ರಸ್ತೆ ಮೆಟ್ರೋ ನಿಲ್ದಾಣಿಂದ ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗದ ಎಲ್ಲ ಮೆಟ್ರೋ ರೈಲುಗಳನ್ನು ಆರು ಬೋಗಿಗಳ ರೈಲುಗಳಾಗಿ ಪರಿವರ್ತಿಸಲಾಗಿದ್ದು ವಾಣಿಜ್ಯ ಸಂಚಾರ ನಡೆಸುತ್ತಿವೆ. 2020ರ ಮಾಚ್‌ರ್‍ ವೇಳೆಗೆ ಆರುಬೋಗಿಗಳ ಎಲ್ಲ 50 ರೈಲುಗಳ ಸಂಚಾರವನ್ನು ಮೊದಲ ಹಂತದ ಮೆಟ್ರೋ ಮಾರ್ಗದಲ್ಲಿ ಆರಂಭಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್‌)ದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು : ಚಲಿಸುತ್ತಿದ್ದ ಮೆಟ್ರೋ ರೈಲು ಬೋಗಿಯಲ್ಲಿ ಹೊಗೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!