
ಬೆಂಗಳೂರು(ಜೂ.25): ರಾಜ್ಯದಲ್ಲಿ ಡೆಲ್ಟಾಪ್ಲಸ್ ರೂಪಾಂತರಿ ವೈರಾಣುವಿನ ಎರಡು ಪ್ರಕರಣ ಮಾತ್ರ ಪತ್ತೆಯಾಗಿದ್ದು, ಇಬ್ಬರೂ ಗುಣಮುಖರಾಗಿದ್ದಾರೆ. ಅವರ ಕುಟುಂಬ ಸದಸ್ಯರಿಗೂ ಸೋಂಕು ಹರಡಿಲ್ಲ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕಚಂದ್ರ ಹೇಳಿದ್ದಾರೆ.
ಗುರುವಾರ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೈಸೂರು ಹಾಗೂ ಬೆಂಗಳೂರು ನಗರದಲ್ಲಿ ತಲಾ ಒಂದೊಂದು ಡೆಲ್ಟಾಪ್ಲಸ್ (ಬಿ1.617.2.1) ಪ್ರಕರಣ ಪತ್ತೆಯಾಗಿದೆ. ಮೇ ತಿಂಗಳಲ್ಲಿ ಸಂಗ್ರಹಿಸಿದ್ದ ಮಾದರಿಯ ಜೀನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರಿಗೆ ಶಿಷ್ಟಾಚಾರದ ಪ್ರಕಾರ ಚಿಕಿತ್ಸೆ ನೀಡಿದ್ದು ಈಗಾಗಲೇ ಗುಣಮುಖರಾಗಿದ್ದಾರೆ ಎಂದರು.
ಡೆಲ್ಟಾಪ್ಲಸ್ ವೈರಸ್ ಬಗ್ಗೆ ರಾಜ್ಯದಲ್ಲಿ ತೀವ್ರ ನಿಗಾ: ಸಚಿವ ಬೊಮ್ಮಾಯಿ
ಮೈಸೂರು ಹಾಗೂ ಬೆಂಗಳೂರಿನ ಎರಡೂ ಪ್ರಕಣದಲ್ಲಿ ಯಾವುದೇ ರೀತಿಯ ಗಂಭೀರ ಸ್ವರೂಪದ ರೋಗ ಲಕ್ಷಣಗಳು ಕಂಡುಬಂದಿಲ್ಲ. ಹೋಂ ಐಸೋಲೇಷನ್ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೀಗಾಗಿ ಆತಂಕ ಬೇಡ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ