ಆರೋಗ್ಯ ಸಮೀಕ್ಷೆಗೆಂದು ತೆರಳಿದ್ದ ಕೊರೋನಾ ವಾರಿಯರ್ಸ್‌ ಮೇಲೆ ಹಲ್ಲೆ

Kannadaprabha News   | Asianet News
Published : Aug 17, 2020, 07:36 AM ISTUpdated : Aug 17, 2020, 07:45 AM IST
ಆರೋಗ್ಯ ಸಮೀಕ್ಷೆಗೆಂದು ತೆರಳಿದ್ದ ಕೊರೋನಾ ವಾರಿಯರ್ಸ್‌ ಮೇಲೆ ಹಲ್ಲೆ

ಸಾರಾಂಶ

ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಮನೆ ಮನೆ ಆರೋಗ್ಯ ಸಮೀಕ್ಷೆಗೆಂದು ತೆರಳಿದಾಗ ಘಟನೆ| ಸಹೋದರ-ಸಹೋದರಿಯಿಂದ ಸಮೀಕ್ಷೆಗೆ ಅಡ್ಡಿ|  ಮೊಬೈಲ್‌ ಕಸಿದು ಹಲ್ಲೆ| ಸಮೀಕ್ಷೆಗೆ ಹೋದ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಂದಿಸಿದ ಕೆ.ಆರ್‌.ನವ್ಯಾ ಹಾಗೂ ಆಕೆಯ ಸಹೋದರ| 

ಬೆಂಗಳೂರು(ಆ.17): ಸರ್ಕಾರ ಸಾಕಷ್ಟು ಎಚ್ಚರಿಕೆ ನೀಡುತ್ತಿದ್ದರೂ ಕೊರೋನಾ ನಿಯಂತ್ರಣಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್‌ಗಳ ಮೇಲೆ ಹಲ್ಲೆ ಮುಂದುವರೆದಿದ್ದು, ಮನೆ-ಮನೆ ಆರೋಗ್ಯ ಸಮೀಕ್ಷೆಗೆಂದು ತೆರಳಿದ್ದ ಕೊರೋನಾ ವಾರಿಯರ್ಸ್‌ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಪೇಟೆ ವಾರ್ಡ್‌ನಲ್ಲಿ ಭಾನುವಾರ ನಡೆದಿದೆ. ಈ ಸಂಬಂಧ ಹಲಸೂರು ಗೇಟ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶದಂತೆ ಬೂತ್‌ ಮಟ್ಟದ ಅಧಿಕಾರಿ, ಶಿಕ್ಷಕರು, ಕಂದಾಯ ವಸೂಲಿಗಾರರು, ಕಂದಾಯ ಪರಿವೀಕ್ಷಕರ ತಂಡ ಚಿಕ್ಕಪೇಟೆ ವಾರ್ಡ್‌ನ ಕಬ್ಬನ್‌ಪೇಟೆಯ 18ನೇ ಅಡ್ಡರಸ್ತೆಯಲ್ಲಿ ಮನೆ ಮನೆ ಆರೋಗ್ಯ ಸಮೀಕ್ಷೆ ನಡೆಸಲು ಮುಂದಾಗಿದ್ದರು.

ಕೊರೋನಾ ಎಫೆಕ್ಟ್: ಟ್ರಾವೆಲ್ಸ್‌ ಉದ್ಯಮ ತತ್ತರ, ಬಿಸಿನೆಸ್‌ ಇಲ್ಲದೇ ಭಾರೀ ನಷ್ಟ

ಈ ವೇಳೆ ಮನೆ ಸಂಖ್ಯೆ14/2ರ ಮನೆಯ ಮಾಲೀಕರ ಮಗಳು ಕೆ.ಆರ್‌.ನವ್ಯಾ ಹಾಗೂ ಆಕೆಯ ಸಹೋದರ ಸಮೀಕ್ಷೆಗೆ ಹೋದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಂದಿಸಿದ್ದಾರೆ. ಅಲ್ಲದೇ ಗುಂಡಪ್ಪ ಹಾಗೂ ಮನೋಜ್‌ ಎಂಬ ಸಿಬ್ಬಂದಿ ಮೇಲೆ ಹಲ್ಲೆ ಸಹ ನಡೆಸಿದಿದ್ದಾರೆ. ಜತೆಗೆ ಘಟನೆಯ ಚಿತ್ರೀಕರಣ ನಡೆಸಿದ ಮೊಬೈಲ್‌ ಫೋನ್‌ ಸಹ ಕಿತ್ತುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೀಗೆ ಸಮೀಕ್ಷೆಗೆ ಅಡ್ಡಿ ಪಡಿಸಿದ ಹಾಗೂ ಹಲ್ಲೆ ನಡೆಸಿದವರ ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!