ದೇವ ಭೂಮಿ ನಿಂತಿರುವುದೇ ಸನಾತನ ಧರ್ಮದ ಮೇಲೆ; ಪ್ರಮೋದ್ ಮುತಾಲಿಕ್

Published : Sep 05, 2023, 04:53 AM IST
ದೇವ ಭೂಮಿ ನಿಂತಿರುವುದೇ ಸನಾತನ ಧರ್ಮದ ಮೇಲೆ; ಪ್ರಮೋದ್ ಮುತಾಲಿಕ್

ಸಾರಾಂಶ

: ಸನಾತನ ಧರ್ಮದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ಸ್ಟಾಲಿನ್ ವಿರುದ್ಧ ದಾವೆ ಹೂಡುತ್ತೇವೆ ಎಂದಿದ್ದಾರೆ.

ಮಂಗಳೂರು (ಸೆ.5) : ಸನಾತನ ಧರ್ಮದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ಸ್ಟಾಲಿನ್ ವಿರುದ್ಧ ದಾವೆ ಹೂಡುತ್ತೇವೆ ಎಂದಿದ್ದಾರೆ.

ಸೋಮವಾರ ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದಯನಿಧಿ ಸ್ಟಾಲಿನ್ ಹೇಳಿಕೆ(Udayanidhi stalin statement)ಯನ್ನು ತೀವ್ರವಾಗಿ ಖಂಡಿಸುತ್ತೇವೆ, ಸನಾತನ ಧರ್ಮ(Sanatana dharma)ಕ್ಕೆ ಆರಂಭ, ಅಂತ್ಯ ಇಲ್ಲ. ಸನಾತನ ಧರ್ಮದ ಮೇಲೆ ಈ ದೇವ ಭೂಮಿ ನಿಂತಿದೆ. ಇಂತಹ ಧರ್ಮದ ಕುರಿತು ನೀಡಿರುವ ಹೇಳಿಕೆ ಅತ್ಯಂತ ಕೆಟ್ಟದಾಗಿದೆ ಎಂದಿದ್ದಾರೆ.

ಉದಯ ನಿಧಿ ಹೇಳಿಕೆ ಮೂಲಕ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗ : ಯಶ್ ಪಾಲ್ ಸುವರ್ಣ

ಪೆರಿಯಾರ್ ಸಂಸ್ಕೃತಿಯಿಂದ ಬಂದ ಇಂತಹವರ ಆಟ ನಡೆಯುವುದಿಲ್ಲ. ಸ್ಟಾಲಿನ್ ತನ್ನ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಮಾಚಿಸಬೇಕು. ಅವರ ಹೇಳಿಕೆ ವಿರುದ್ಧ ತಮಿಳುನಾಡಿನಲ್ಲೂ ಪ್ರತಿಭಟನೆ ನಡೆಸುತ್ತೇವೆ ಎಂದರು.

ಕ್ರಮಕ್ಕೆ ವಿಹಿಂಪ ಆಗ್ರಹ:

ಸನಾತನ ಧರ್ಮಕ್ಕೆ ಸ್ಟಾಲಿನ್ ಮಾಡಿದ ಅವಮಾನ ಖಂಡನೀಯವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮಕ್ಕೆ ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಆಗ್ರಹಿಸಿದೆ.

ಹಿಂದೂ ಧರ್ಮದ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದು ಅಕ್ಷಮ್ಯ ಅಪರಾಧವಾಗಿದೆ. ಸ್ಟಾಲಿನ್ ನವರನ್ನು ತಕ್ಷಣ ಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರಾದ ಪ್ರೊ.ಎಂ.ಬಿ.ಪುರಾಣಿಕ್‌ ಹಾಗೂ ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಸನಾತನ ಧರ್ಮ ನಿರ್ಮೂಲನೆ ಮಾಡಲು ಅವರಪ್ಪನಿಂದಲೂ ಸಾಧ್ಯವಿಲ್ಲ; ಈಶ್ವರಪ್ಪ ವಾಗ್ದಾಳಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!