ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಕೋರ್ಟ್‌ ಆದೇಶ, ಏನಿದು ಪ್ರಕರಣ?

Published : Dec 20, 2025, 06:52 AM IST
Court orders Chaitra Kundapura not to harass her father

ಸಾರಾಂಶ

ಬಿಗ್‌ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಹಾಗೂ ಅವರ ತಾಯಿ ತಮಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆಂದು ತಂದೆ ಬಾಲಕೃಷ್ಣ ನಾಯ್ಕ್ ನೀಡಿದ ದೂರಿನ ಅನ್ವಯ, ಉಡುಪಿಯ ಹಿರಿಯ ನಾಗರಿಕರ ನ್ಯಾಯಾಲಯವು ಚೈತ್ರಾ ಅವರಿಗೆ ತಂದೆಗೆ ಕಿರುಕುಳ ನೀಡದಂತೆ ಆದೇಶಿಸಿದೆ. 

ಉಡುಪಿ(ಡಿ.20): ಉಡುಪಿಯ ಹಿರಿಯ ನಾಗರಿಕರ ನ್ಯಾಯಾಲಯವು ಚೈತ್ರಾ ಕುಂದಾಪುರ ಅವರಿಗೆ ಮಹತ್ವದ ಆದೇಶವೊಂದನ್ನು ನೀಡಿದೆ. ತನ್ನ ತಂದೆಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು ಎಂದು ನ್ಯಾಯಾಲಯವು ಚೈತ್ರಾ ಅವರಿಗೆ ಸ್ಪಷ್ಟವಾಗಿ ಸೂಚಿಸಿದೆ.

ಪತ್ನಿ ಮಗಳು ಸೇರಿ ಮಾನಸಿಕ ಕಿರುಕುಳ:

ನ್ಯಾಯಾಲಯದ ಮೊರೆ ಹೋಗಿದ್ದ ತಂದೆ ಬಾಲಕೃಷ್ಣ ನಾಯ್ಕ್ತನ್ನ ಮಗಳು ಚೈತ್ರಾ ಮತ್ತು ಪತ್ನಿ ಇಬ್ಬರೂ ಸೇರಿ ತನಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಚೈತ್ರಾ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಈಗ ತಂದೆಯ ಪರವಾಗಿ ತೀರ್ಪು ಪ್ರಕಟಿಸಿದೆ.

ರಕ್ಷಣೆ ನೀಡಲು ಪೊಲೀಸರಿಗೆ ಕೋರ್ಟ್ ಸೂಚನೆ

ಬಾಲಕೃಷ್ಣ ನಾಯ್ಕ್ ಅವರಿಗೆ ಮನೆಯಲ್ಲಿ ನಿರ್ಭೀತಿಯಿಂದ ವಾಸಿಸಲು ಅವಕಾಶ ಮಾಡಿಕೊಡಬೇಕು ಎಂದು ನ್ಯಾಯಾಲಯ ತಿಳಿಸಿದೆ. 'ಕರ್ನಾಟಕ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ನಿಯಮ'ಗಳ ಅಡಿಯಲ್ಲಿ ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಕುಂದಾಪುರ ಪೊಲೀಸರಿಗೆ ನ್ಯಾಯಾಲಯವು ನಿರ್ದೇಶನ ನೀಡಿದೆ.

ವಿರೋಧದ ನಡುವೆಯೂ ವಿವಾಹವಾಗಿದ್ದ ಚೈತ್ರಾ

ತಂದೆಯ ಇಚ್ಛೆಗೆ ವಿರುದ್ಧವಾಗಿ ಚೈತ್ರಾ ಅವರು ಇತ್ತೀಚೆಗಷ್ಟೇ ಪ್ರೇಮ ವಿವಾಹವಾಗಿದ್ದರು. ಸದ್ಯ ಅವರು ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ 'ಬಿಗ್‌ಬಾಸ್' ಮನೆಯಲ್ಲಿ ಸ್ಪರ್ಧಿಯಾಗಿ ಭಾಗವಹಿಸುತ್ತಿರುವ ಬೆನ್ನಲ್ಲೇ ಈ ಕಾನೂನು ಸಂಕಷ್ಟ ಎದುರಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ನಗರದ 35 ರಸ್ತೆಗಳಲ್ಲಿ ಇನ್ನು ಪೇ ಆ್ಯಂಡ್‌ ಪಾರ್ಕ್‌!
ಅಕ್ರಮಕ್ಕೆ ಅವಕಾಶವೇ ಇಲ್ಲ! ಕೆಇಎ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು: ಹೇಗಿದೆ ಗೊತ್ತಾ ಇಂದಿನ ಸಿದ್ಧತೆ?