ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಉಡುಪಿಗೆ ಬಂದ ಬೊಮ್ಮಾಯಿಗೆ ವಿಶೇಷ ಗಿಫ್ಟ್

Published : Aug 13, 2021, 07:58 PM ISTUpdated : Aug 13, 2021, 08:11 PM IST
ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಉಡುಪಿಗೆ ಬಂದ ಬೊಮ್ಮಾಯಿಗೆ ವಿಶೇಷ ಗಿಫ್ಟ್

ಸಾರಾಂಶ

* ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಸಿಎಂಗೆ ವಿಶೇಷ ಗಿಫ್ಟ್ ಕೊಟ್ಟ ಪಲಿಮಾರು ಶ್ರೀ * ಪಲಿಮಾರು ಶ್ರೀಗಳಿಂದ ಪೌರಾಣಿಕೆ ಗ್ರಂಥಗಳನ್ನು ಸ್ವೀಕರಿಸಿದ ಸಿಎಂ  * ಶ್ರೀಪಾದದ್ವಯರಿಂದ ಅನುಗ್ರಹ ಮಂತ್ರಾಕ್ಷತೆ ಪಡೆdದ ಬೊಮ್ಮಾಯಿ

ಉಡುಪಿ, (ಆ.13): ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಮೇಲೆ ಪ್ರಥಮ ಬಾರಿಗೆ ಇಂದು (ಆ.13) ಉಡುಪಿ ಜಿಲ್ಲೆಗೆ ಭೇಟಿ ನೀಡಿದರು.

 ಭೇಟಿ ನೀಡಿದ  ಬಸವರಾಜ ಬೊಮ್ಮಾಯಿ ಅವರು ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಮತ್ತು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಅವರನ್ನು ಗೌರವಿಸಿ, ಶ್ರೀಪಾದದ್ವಯರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

'2023ಕ್ಕೆ ಬೊಮ್ಮಾಯಿ ನಾಯಕತ್ವದಲ್ಲಿ ಮತ್ತೆ ಅಧಿಕಾರಕ್ಕೆ'

 ಈ ಸಂದರ್ಭದಲ್ಲಿ ಶ್ರೀಗಳು ಮುಖ್ಯಮಂತ್ರಿ ಅವರಿಗೆ ಶಾಲು ಹೊದೆಸಿ ಪೌರಾಣಿಕ ಗ್ರಂಥಗಳನ್ನು ನೀಡಿ ಗೌರವಿಸಿದರು.
ಅರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಸಮಾಜಕಲ್ಯಾಣ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿ  ಪ್ರಾಧಿಕಾರದ ಅಧ್ಯಕ್ಷರಾದ  ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ಸುರೇಶ ನಾಯಕ್  ಮೊದಲಾದವರು ಉಪಸ್ಥಿತರಿದ್ದರು.

ನಿನ್ನೆ (ಆ.12) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ವ್ಯವಸ್ಥೆ ಪರಿಶೀಲಿಸಿ ಇಂದು (ಶುಕ್ರವಾರ) ಉಡುಪಿಗೆ ಆಗಮಿಸಿದರು.

ಉಡುಪಿಯಲ್ಲಿ 250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.  ಹಾಗೇ ಜಿಲ್ಲೆಯಲ್ಲಿ ಕೋವಿಡ್-19 ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!