ಧರ್ಮಸ್ಥಳ, ಚಾಮುಂಡಿ ಬೆಟ್ಟ ವಿವಾದ, ಡಿಕೆ ಶಿವಕುಮಾರ ಹೇಳಿಕೆಗೆ ವಿ ಸೋಮಣ್ಣ ತಿರುಗೇಟು

Published : Aug 28, 2025, 02:08 PM IST
Union Minister V Somanna (Photo/ANI)

ಸಾರಾಂಶ

ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ಕುರಿತು ಡಿಕೆ ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ವಿ. ಸೋಮಣ್ಣ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಹೇಳಿಕೆಯನ್ನು ಅಕ್ಷಮ್ಯ ಅಪರಾಧ ಎಂದು ಕರೆದ ಸೋಮಣ್ಣ, ಧಾರ್ಮಿಕ ವಿಚಾರಗಳನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದ್ದಾರೆ.

ಬೆಂಗಳೂರು (ಆ.28): ಧರ್ಮಸ್ಥಳ ವಿಚಾರದಲ್ಲಿ ನಾವೆಂದೂ ರಾಜಕೀಯ ಮಾಡಿಲ್ಲ. ಅದು ಹಿಂದೂಗಳ ನಂಬಿಕೆ, ಸಂಸ್ಕಾರ ಮತ್ತು ಆಚರಣೆಗಳಿಗೆ ಸಂಬಂಧಿಸಿದ ಪವಿತ್ರ ಸ್ಥಳವಾಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದರು.

ಧರ್ಮಸ್ಥಳ ಹಾಗೂ ಚಾಮುಂಡಿಬೆಟ್ಟ ಕುರಿತಾದ ವಿವಾದ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ತಾವೇ ತೋಡಿದ ಗುಂಡಿಯಲ್ಲಿ ಬಿದ್ದು, ತಾವೇ ಮುಚ್ಚಲಾಗದ ಪರಿಸ್ಥತಿಗೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: 'ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡೋದ್ರಲ್ಲಿ ತಪ್ಪೇನಿದೆ?' ಇನ್ನೂ ಎರಡೂವರೆ ವರ್ಷ ಬಿಜೆಪಿಗೆ ವಿರೋಧಿಸೋದೆ ಕೆಲ್ಸ: ಸತೀಶ್ ಜಾರಕಿಹೊಳಿ ಕಿಡಿ

ಚಾಮುಂಡಿ ಬೆಟ್ಟ ಹಿಂದುಗಳದ್ದಲ್ಲ ಎಂದ ಡಿಕೆಶಿಗೆ ತಿರುಗೇಟು:

ಚಾಮುಂಡಿಬೆಟ್ಟ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಚಿವರು, ಯಾರೋ ಹೇಳಿದ ಮಾತಿಗೆ ದಾರಿ ತಪ್ಪಿಸುತ್ತಿದ್ದಾರೆ. ಸಾವಿರ ಸುಳ್ಳು ಹೇಳಿದರೂ ಅದು ಸತ್ಯವಾಗದು. ಡಿಕೆಶಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿ ಮಾತ್ರವಲ್ಲ ಎಂದು ಹೇಳಿರುವುದು ಸರಿಯಲ್ಲ. ನಾವು ಮಸೀದಿಗೆ ಚರ್ಚ್‌ಗೆ ಹೋಗುತ್ತೇವೆ, ಆದರೆ ಅವುಗಳನ್ನು ನಮ್ಮದು ಎಂದರೆ ಅವರು ಒಪ್ಪಿಕೊಳ್ಳುತ್ತಾರೆಯೇ? ಧರ್ಮಸ್ಥಳದ ಬಗ್ಗೆ ಮಾತನಾಡಿದಾಗ ಭಗವಂತನ ಶಕ್ತಿಯಿಂದ ಇವರು ಈ ದೇಶದಲ್ಲಿರುವಿರಿ ಎಂದು ಭಾವಿಸಿದ್ದೆ, ಆದರೆ ಚಾಮುಂಡೇಶ್ವರಿ ವಿಚಾರದಲ್ಲಿ ಅವರ ಹೇಳಿಕೆ ತಪ್ಪಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: 'ಮೈಸೂರು ದಸರಾ ಸರ್ಕಾರಿ ಕಾರ್‍ಯಕ್ರಮ..', ಬಾನು ಮುಷ್ತಾಕ್‌ ವಿರೋಧಕ್ಕೆ ಹರಿಪ್ರಸಾದ್ ಆಕ್ಷೇಪ

ನಿಸಾರ್ ಅಹಮದ್ ಭುವನೇಶ್ವರಿಯನ್ನ ತಾಯಿಯಂತೆ ಕಂಡಿದ್ದರು:

ನಿಸಾರ್ ಅಹಮದ್ ಅವರಿಂದ ಉದ್ಘಾಟನೆ ಮಾಡಿಸಿದ್ದೇವೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸೋಮಣ್ಣ, ನಿಸಾರ್ ಅಹಮದ್ ಕನ್ನಡ ಭುವನೇಶ್ವರಿದೇವಿಯನ್ನ ತಾಯಿಯ ರೀತಿಯಲ್ಲಿ ಒಪ್ಪಿಕೊಂಡಿದ್ದಾರೆ. ಆದರೆ, ಇದನ್ನು ರಾಜಕೀಯಗೊಳಿಸುವ ಅಗತ್ಯವಿಲ್ಲ. ನಾವು ನಮ್ಮ ಧರ್ಮಕ್ಕೆ ಸಣ್ಣ ಅಪಚಾರವಾದಾಗ ಅದನ್ನು ಸರಿಪಡಿಸಿಕೊಂಡಿದ್ದೇವೆ. ಸರ್ಕಾರ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ತಿಣುಕಾಡುತ್ತಿದೆ ಎಂದು ತಿರುಗೇಟು ನೀಡಿದರು.

ಧರ್ಮಸ್ಥಳ, ಚಾಮುಂಡಿ ಬೆಟ್ಟ ಕುರಿತಾದ ಹೇಳಿಕೆಗಳು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!