ಉಮೇಶ್ ಜಾಧವ್ ರಾಜೀನಾಮೆ: ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ದಿನಾಂಕ ಪ್ರಕಟ

Published : Apr 16, 2019, 07:18 PM ISTUpdated : Apr 16, 2019, 07:36 PM IST
ಉಮೇಶ್ ಜಾಧವ್ ರಾಜೀನಾಮೆ: ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ದಿನಾಂಕ ಪ್ರಕಟ

ಸಾರಾಂಶ

ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. 

ಬೆಂಗಳೂರು, [ಏ.16]: ಉಮೇಶ್ ಜಾಧವ್ ರಾಜೀನಾಮೆಯಿಂದ‌ ತೆರವಾಗಿರುವ ಚಿಂಚೋಳಿ‌ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.

ಶಿವಳ್ಳಿ ನಿಧನ: ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಡೇಟ್ ಫಿಕ್ಸ್..!

ಇದೇ ಮೇ 19ರಂದು ಮತದಾನ ನಡೆಯಲಿದ್ದು, ಮೇ 23ಕ್ಕೆ ಮತ ಎಣಿಕೆ ನಡೆಯಲಿದೆ. ಇನ್ನು ನಾಮಪತ್ರ ಸಲ್ಲಿಸಲು ಏಪ್ರಿಲ್ 29  ಕೊನೆಯ ದಿನವಾಗಿದೆ.

ಇನ್ನು ಮೇ 19ರಂದೇ ಸಚಿವ ಸಿ.ಎಸ್​. ಶಿವಳ್ಳಿ ಅವರ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಮೇ23ಕ್ಕೆ ಮತ ಎಣಿಕೆ ನಡೆಯಲಿದೆ.

ಡಾ.ಉಮೇಶ್ ಜಾಧವ್ ಅವರು ಕೆಲಕಾರಣಾಂತರಗಳಿಂದ ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಷ್ಟೇ ಅಲ್ಲದೇ ಕಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು, ಇದೀಗ ಕಲಬುರಗಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ