
ಹುಬ್ಬಳ್ಳಿ(ಮಾ.26): ಧಾರವಾಡ ಕಟ್ಟಡ ದುರಂತದ ಬೆನ್ನಲ್ಲೇ, ಹುಬ್ಬಳ್ಳಿಯಲ್ಲೂ ನಿರ್ಮಾಣ ಹಂತದ ಕಟ್ಟಡದ ಗೋಡೆಯೊಂದು ಕುಸಿದಿದೆ.
ನಗರದ ಕೇಶ್ವಾಪೂರ ಬಳಿ ನಿರ್ಮಾಣ ಹಂತದ ಕಟ್ಟಡದ ಗೋಡೆ ಪಕ್ಕದ ಮನೆಯ ಮೇಲೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಘಟನೆ ನಡೆದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಇಲ್ಲಿನ ಮೊಹಮ್ಮದ್ ಅಲಿ ಮಕಾಂದಾರ್ ಎಂಬುವವರಿಗೆ ಸೇರಿದ ಮನೆ ಮೇಲೆ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದಿದೆ. ಘಟನೆಗೆ ಬಿಲ್ಡರ್ ರಾಹು ಹಿರೇಮಠ ಅವರ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.
ಸದ್ಯ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ