ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಮೊದಲು ನಮ್ಮ ಸಂಪ್ರಾದಯ ತಿಳಿದುಕೊಳ್ಳಲಿ: ವಿ ಸೋಮಣ್ಣ

Kannadaprabha News, Ravi Janekal |   | Kannada Prabha
Published : Sep 05, 2025, 12:52 AM IST
Minister V Somanna

ಸಾರಾಂಶ

ದಸರಾ ಉದ್ಘಾಟಕರಿಗೆ ಚಾಮುಂಡೇಶ್ವರಿ ದೇವಿಯ ಇತಿಹಾಸ, ಉತ್ಸವ, ಆರಾಧನೆ, ಸಂಪ್ರದಾಯ ತಿಳಿಸಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. 

ಮೈಸೂರು (ಸೆ.5): ದಸರಾ ಉದ್ಘಾಟಕರಿಗೆ ಮೊದಲು ತಾಯಿ ಚಾಮುಂಡೇಶ್ವರಿ ದೇವಿ ಇತಿಹಾಸ, ಉತ್ಸವ, ಆರಾಧನೆ, ಸಂಪ್ರದಾಯವನ್ನು ತಿಳಿಸಿ. ಅವರು ನಮ್ಮ ಸಂಪ್ರದಾಯ ಅರಿತು ತಮ್ಮ ಕಾರ್ಯ ಮಾಡಲಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. 

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಂಬಿಕೆ, ಭಕ್ತಿಗೆ, ಇತಿಹಾಸಕ್ಕೆ ಮತ್ತೊಂದು ಹೆಸರು ಚಾಮುಂಡಿ ಬೆಟ್ಟ. ಇಂತಹ ಚಾಮುಂಡಿಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆಗೆ ಆಹ್ವಾನಿತರು ಅರ್ಹರೋ ಅಥವಾ ಇಲ್ಲವೋ ಎಂಬ ಚರ್ಚೆ ಮಾಡಲ್ಲ. ನಮ್ಮ ಸಂಪ್ರದಾಯಕ್ಕೆ ಧಕ್ಕೆ ಆಗದಂತೆ ಉದ್ಘಾಟಕರು ನಡೆದುಕೊಳ್ಳಲಿ. ರಾಜ್ಯ ಸರ್ಕಾರ ಯಾರನ್ನು ತೃಪ್ತಿಪಡಿಸಲು ಉದ್ಘಾಟಕರನ್ನು ಆಯ್ಕೆ ಮಾಡಿಕೊಂಡಿದ್ದೆಯೋ ಗೊತ್ತಿಲ್ಲ. ಬಾನು ಮುಷ್ತಾಕ್‌ ಅವರಿಗೆ ಸರ್ಕಾರ ಚಾಮುಂಡಿ ಬೆಟ್ಟದ ಶಿಷ್ಟಾಚಾರ, ಸಂಪ್ರದಾಯದ ಬಗ್ಗೆ ತಿಳಿಸಲಿ ಎಂದರು.

ಧಾರ್ಮಿಕ ಕೆಲಸದ ವಿಚಾರದಲ್ಲಿ ಸರ್ಕಾರ ‘ಟೇಕ್ ಈಟ್ ಫಾರ್ ಗ್ರ್ಯಾಂಟೆಡ್‌’ ಅಂದುಕೊಳ್ಳಬಾರದು.

ಮುಂದೆ ದೇವರ ಇಚ್ಛೆಯಂತೆ

ತುಮಕೂರಿನಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ. ಹೀಗಾಗಿ ಅಲ್ಲಿ ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ ಅಂದಿದ್ದೇನೆ. ಇನ್ನೂ ಬೇರೆ ಕಡೆ ಹೋಗೋಣ ಅಂತಾ. ಎಲ್ಲಿ ಅಂತಾ ನಿರ್ಧಾರ ಆಗಿಲ್ಲ. ದೇವರ ಆಶೀರ್ವಾದ, ಇಚ್ಛೆ ಏನಿದೆಯೋ ಗೊತ್ತಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ