ರಾಜ್ಯ ಸರ್ಕಾರಕ್ಕೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್

Kannadaprabha News   | Asianet News
Published : Oct 17, 2020, 09:07 AM IST
ರಾಜ್ಯ ಸರ್ಕಾರಕ್ಕೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್

ಸಾರಾಂಶ

ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಏನದು  ಇಲ್ಲಿದೆ ಮಾಹಿತಿ 

ಬೆಂಗಳೂರು (ಅ.17):  ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ) ಪರಿಹಾರದ ಕುರಿತು ಕೇಂದ್ರಕ್ಕೆ ರಾಜ್ಯವು ಮನವಿ ಮಾಡಿದ್ದ ಆಯ್ಕೆ-1ರಡಿಗೆ ಅನುಮತಿ ನೀಡಿದ್ದು, ವಿಶೇಷ ಗವಾಕ್ಷಿ ಮೂಲಕ ಸಾಲ ಪಡೆಯಲು ಅನುವು ಮಾಡಿಕೊಟ್ಟಿದೆ ಎಂದು ಜಿಎಸ್‌ಟಿ ಪರಿಷತ್ತಿನ ಸದಸ್ಯರೂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೋವಿಡ್‌ ನಿರ್ವಹಣೆ ಮತ್ತು ಆರ್ಥಿಕತೆ ಬೆಳವಣಿಗೆಗಾಗಿ ಜಿಎಸ್‌ಟಿ ಪರಿಹಾರವನ್ನು ಸಂಪೂರ್ಣವಾಗಿ ಪಡೆಯಲು ಆಯ್ಕೆ-1ರ ಅಡಿಯಲ್ಲಿ ಕೇಂದ್ರದಿಂದ ಹಣಕಾಸು ನೆರವು ಪಡೆಯಲು ತೀರ್ಮಾನಿಸಲಾಗಿದೆ. ಆಯ್ಕೆ ಒಂದರಲ್ಲಿ ಅಸಲು ಹಾಗೂ ಬಡ್ಡಿ ಮರುಪಾವತಿ ಇಲ್ಲದೆ ಸೆಸ್‌ ಮುಖಾಂತರ ತುಂಬಿಕೊಡುತ್ತದೆ. ಇದರಿಂದ ರಾಜ್ಯಕ್ಕೆ ಯಾವುದೇ ರೀತಿಯ ಆರ್ಥಿಕ ಭಾರವಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೋದಿ ಬಿಡುಗಡೆ ಮಾಡಿದ 17 ಸುಪರ್ ತಳಿಗಳು, ಏನಿದರ ವಿಶೇಷ?

ರಾಜ್ಯವು 2020-21ನೇ ಸಾಲಿನಲ್ಲಿ 12,407 ಕೋಟಿ ರು.ವರೆಗೆ ಸಾಲ ಪಡೆಯಲು ಅರ್ಹವಾಗಿರುತ್ತದೆ. ಭವಿಷ್ಯದಲ್ಲಿ ಸೆಸ್‌ ಆದಾಯದಿಂದ ಪೂರ್ತಿ ಅಸಲು ಮತ್ತು ಬಡ್ಡಿಯನ್ನು ಭರಿಸಲಾಗುವುದು. ಇದರಿಂದಾಗಿ ರಾಜ್ಯದ ಆಯವ್ಯಯ ಸಂಪನ್ಮೂಲಗಳಿಂದ ಅಸಲು ಮತ್ತು ಬಡ್ಡಿಯನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ. ರಾಜ್ಯದ ಪಾಲಿನ ಸಂಪೂರ್ಣ ಜಿಎಸ್‌ಟಿ ಪರಿಹಾರವನ್ನು ಪಾವತಿಸಲು ಮತ್ತು ಈ ಸಂಬಂಧದ ಎಲ್ಲಾ ಕಾನೂನಾತ್ಮಕ ಹೊಣೆಗಾರಿಕೆಗಳನ್ನು ನಿರ್ವಹಿಸುವುದಾಗಿ ಕೇಂದ್ರ ಒಪ್ಪಿದೆ.

ಬಾಕಿ ಪರಿಹಾರ ಸಂಬಂಧ ಪರಿಹಾರ ಸೆಸ್‌ ಅನ್ನು ವಿಧಿಸುವುದನ್ನು 2022ರ ಜುಲೈ ನಂತರವೂ ವಿಸ್ತರಿಸಲು ಜಿಎಸ್‌ಟಿ ಪರಿಷತ್‌ ಈಗಾಗಲೇ ನಿರ್ಧರಿಸಿದೆ. 2020-21ನೇ ಸಾಲಿನಲ್ಲಿ ರಾಜ್ಯಗಳಿಂದ ಅಥವಾ ರಾಜ್ಯದ ಪರವಾಗಿ ಪಡೆಯುವ ಸಾಲದ ಮೇಲಿನ ಬಡ್ಡಿಯನ್ನು ರಾಜ್ಯಗಳಿಗೆ ಕಾಲಾನುಕಾಲಕ್ಕೆ ನೀಡಲಾಗುವುದು. ಜಿಎಸ್‌ಟಿ ಪರಿಹಾರದ ಮೊತ್ತದಿಂದ ಕಡಿತಗೊಳಿಸಲಾಗುವುದು ಎಂದು ಭಾವಿಸಲಾಗಿದೆ. ಆದರೆ, ಈ ಮೊತ್ತವು ಬಡ್ಡಿಯ ದರದ ಮೇಲೆ ಅವಲಂಬಿತವಾಗಿರುತ್ತದೆ. ಸೆಸ್‌ ಸಂಗ್ರಹದಿಂದ ಪಡೆಯುವ ಸಂಪೂರ್ಣ ಪಾವತಿಯವರೆಗೂ ರಾಜ್ಯಗಳ ಜಿಎಸ್‌ಟಿ ಪರಿಹಾರದ ಹಕ್ಕು ಮುಂದುವರಿಯುತ್ತದೆ ಎಂದು ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಲಾಟೆ, ದೊಂಬಿ, ಗಲಭೆ ಇಲ್ಲದೆ 518 ಆರೆಸ್ಸೆಸ್‌ ಪಥ ಸಂಚಲನ : ಸರ್ಕಾರ
ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!