
ಬೆಂಗಳೂರು, (ಸೆ.28): ಕೊರೋನಾ (Covid19) ಬಗ್ಗೆ ಮತ್ತಷ್ಟು ನಿಗಾವಹಿಸುವಂತೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲ ಅವರು ಕರ್ನಾಟಕ (Karnataka) ಮುಖ್ಯ ಕಾರ್ಯದರ್ಶಿಗೆ ಸೂಚನೆ ಕೊಟ್ಟಿದ್ದಾರೆ.
ಪತ್ರದ ಮೂಲಕ ಸೂಚಿಸಿರುವ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲ, ಹಬ್ಬದ ದಿನಗಳಲ್ಲಿ ಕೊರೋನಾ ನಿಯಮಗಳ ಪಾಲನೆ ಕುರಿತು ಎಚ್ಚರ ವಹಿಸುವಂತೆ ಹೇಳಿದ್ದಾರೆ. ಅಲ್ಲದೇ ಟೆಸ್ಟ್, ಟ್ರ್ಯಾಕ್, ಟ್ರಿಟ್, ವ್ಯಾಕ್ಸಿನ್ ತಂತ್ರಗಾರಿಕೆ ಮುಂದುವರೆಸಲು ರಾಜ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್ಗೆ ಸೂಚನೆ ಕೊಟ್ಟಿದ್ದಾರೆ.
ಬೆಂಗಳೂರು: ಒಂದೇ ಕಾಲೇಜಿನ 60 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್
ಎಲ್ಲ ಜಿಲ್ಲಾ ಮತ್ತು ಇತರ ಸ್ಥಳೀಯ ಆಡಳಿತಾಧಿಕಾರಿಗಳು ಆರೋಗ್ಯ ಇಲಾಖೆಯ ಸೂಚನೆಯಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮುಂಬರುವ ಹಬ್ಬಸಾಲಿನಲ್ಲಿ ದೊಡ್ಡಮಟ್ಟದಲ್ಲಿ ಜನಸಂದಣಿ ಸೇರದಂತೆ ತಡೆಯಬೇಕು. ಎಚ್ಚರಿಕೆಯಿಂದ ವರ್ತಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದಿದ್ದಾರೆ.
ಪರೀಕ್ಷೆಯ ಪ್ರಮಾಣ ಹೆಚ್ಚಿಸುವುದು, ಸೋಂಕಿತರನ್ನು ಪತ್ತೆ ಮಾಡುವುದು ಮತ್ತು ಲಸಿಕೆ ಹಾಕುವ ಪ್ರಮಾಣ ಜಾಸ್ತಿ ಮಾಡುವ ಬಗ್ಗೆ ಗಮನ ನೀಡಬೇಕು. ಲಸಿಕೆ ಪಡೆಯಲು ಅರ್ಹರಾದ ವಯೋಮಾನಗಳ ಗುಂಪುಗಳನ್ನು ಗುರುತಿಸಿ ಆದ್ಯತೆ ಮೇಲೆ ಎರಡೂ ಡೋಸ್ ಲಸಿಕೆ ಕೊಡಬೇಕು ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ