ಹೆಚ್.ಡಿ ರೇವಣ್ಣ- ಪ್ರಜ್ವಲ್ ಪ್ರಕರಣದಲ್ಲಿ ಅಂತರ ಕಾಪಾಡಿಕೊಂಡ ಅಮಿತ್ ಶಾ..!

Published : May 04, 2024, 11:21 PM IST
ಹೆಚ್.ಡಿ ರೇವಣ್ಣ- ಪ್ರಜ್ವಲ್ ಪ್ರಕರಣದಲ್ಲಿ ಅಂತರ ಕಾಪಾಡಿಕೊಂಡ ಅಮಿತ್ ಶಾ..!

ಸಾರಾಂಶ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಪಾಡಿಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದರು. ಇದೀಗ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಅಂತರ ಕಾಪಾಡಿಕೊಂಡಿದ್ದಾರೆ. 

ಬೆಂಗಳೂರು(ಮೇ.04): ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಾಗೂ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂತರ ಕಾಪಾಡಿಕೊಂಡಿದ್ದಾರೆ. 

ಹೌದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಪಾಡಿಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದರು. ಇದೀಗ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಅಂತರ ಕಾಪಾಡಿಕೊಂಡಿದ್ದಾರೆ. 
ಇಂದು(ಶನಿವಾರ) ಮಧ್ಯಾಹ್ನದಿಂದ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದರು. ಇದೇ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ರಾತ್ರಿ 8:15 ಕ್ಕೆ ಅಮಿತ್ ಶಾ ಆಗಮಿಸಿದ್ದರು. 

ದೇವೇಗೌಡರ ಮನೆಯಲ್ಲೇ ರೇವಣ್ಣ ಬಂಧನ, ಶರಣಾಗತಿಗೆ ಮುಂದಾದ್ರಾ ಪ್ರಜ್ವಲ್ ರೇವಣ್ಣ?

ಆಂಧ್ರಪ್ರದೇಶ ಚುನಾವಣಾ ಪ್ರಚಾರಕ್ಕೆ ಹೋಗುವುದಾಗಿ ಬೆಂಗಳೂರಿನ ಆಗಮಿಸಿ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಅಮಿತ್‌ ಶಾ ವಾಸ್ತವ್ಯ ಹೂಡಿದ್ದಾರೆ. ಅಮಿತ್ ಶಾ ಹೊಟೇಲ್‌ಗೆ ಬಂದು ಒಂದು ಗಂಟೆಯ ಬಳಿಕ ಕುಮಾರಸ್ವಾಮಿ ಹೋಟೆಲ್‌ನಿಂದ ತೆರಳಿದ್ದಾರೆ. ಅಮಿತ್ ಶಾ ಭೇಟಿಯಾಗದೆ ಹೆಚ್.ಡಿ‌ ಕುಮಾರಸ್ವಾಮಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ವಲ್‌ ರೇವಣ್ಣ ಕೇಸಿನಿಂದ ಬಿಜೆಪಿಗೂ ಮುಜುಗರವಾಗಿದೆ. ಹೀಗಾಗಿ ಈ ಪ್ರಕರಣದಿಂದ ಅಮಿತ್ ಶಾ ಅಂತರ ಕಾಪಾಡಿಕೊಂಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪತಿಯ ಕೊಲೆ ಪ್ರಕರಣದಲ್ಲಿ ಜಾಮೀನಿಗೆ ಬಂದಾಕೆಗೆ ಹೈಕೋರ್ಟ್ ಶಾಕ್, ಮಹಿಳೆ ಎಂಬ ಕಾರಣಕ್ಕೆ ಬೇಲ್ ನೀಡೋಲ್ಲ ಎಂದಿದ್ದೇಕೆ ಕೋರ್ಟ್? ಏನಿದು ಪ್ರಕರಣ?
Karnataka News Live ಉಚಿತ ವಿದ್ಯುತ್‌, ₹2000ಕ್ಕೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ? ಗೃಹಜ್ಯೋತಿ, ಗೃಹಲಕ್ಷ್ಮೀ ಸ್ಕೀಂ ಪರಿಷ್ಕರಣೆಗೆ ಚಿಂತನೆ!