ಕಾಂಗ್ರೆಸ್ ವಿರುದ್ಧ ಪೋಸ್ಟ್‌: ಕೇಂದ್ರ ಸಚಿವ ನಡ್ಡಾಗೆ ಕರ್ನಾಟಕ ಪೊಲೀಸ್‌ ವಿಚಾರಣೆಯಿಂದ ವಿನಾಯ್ತಿ..!

Published : Jun 22, 2024, 06:00 AM IST
ಕಾಂಗ್ರೆಸ್ ವಿರುದ್ಧ ಪೋಸ್ಟ್‌: ಕೇಂದ್ರ ಸಚಿವ ನಡ್ಡಾಗೆ ಕರ್ನಾಟಕ ಪೊಲೀಸ್‌ ವಿಚಾರಣೆಯಿಂದ ವಿನಾಯ್ತಿ..!

ಸಾರಾಂಶ

ಪೊಲೀಸರು ಪ್ರಕರಣದ ತನಿಖೆ ನಡೆಸಬಹುದು. ಆದರೆ, ನಡ್ಡಾರನ್ನು ತನಿಖೆ/ವಿಚಾರಣೆಗೆ ಕರೆಸಬಾರದು. ಅವರ ವಿರುದ್ದ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ನಿರ್ದೇಶನ ನೀಡಿದ ನ್ಯಾಯಪೀಠ, ಪ್ರಕರಣದ ಮೂಲ ದೂರುದಾರರಾದ ಕಲಬುರಗಿಯ ಪ್ರವೀಣ್ ಕುಮಾರ್ ಪಾಟೀಲ್‌ಗೆ ನೋಟಿಸ್ ಜಾರಿಗೊಳಿಸಿದೆ.  

ಬೆಂಗಳೂರು(ಜೂ.22):  'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮೇತರ ಸಮುದಾಯದವರ ಸಂಪತ್ತು ದೋಚಿ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ' ಎಂದು 29020 ಸುವ ಅನಿಮೇಟೆಡ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧದ ತನಿಖೆ ಮುಂದುವರಿಸಲು ಅನುಮತಿ ನೀಡಿರುವ ಹೈಕೋರ್ಟ್, ವಿಚಾರಣೆಗೆ ಹಾಜರಾಗುವುದರಿಂದ ಕೇಂದ್ರ ಸಚಿವ ಜೆ.ಪಿ. ನಡ್ಡಾರಿಗೆ ವಿನಾಯ್ತಿ ನೀಡಿದೆ.

ಕರಣ ಕುರಿತಂತೆ ತಮ್ಮ ವಿರುದ್ಧ ಕಲಬುರಗಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಪಡಿಸುವಂತೆ ಕೋರಿ ನಡ್ಡಾ ಮತ್ತು ಮಾಳವೀಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಈ ಆದೇಶ ಮಾಡಿತು. 

News Hour: ಜೆ. ಪಿ ನಡ್ಡಾ ರಾಜೀನಾಮೆ, ಯಾರಾಗ್ತಾರೆ ಬಿಜೆಪಿ ರಾಷ್ಟ್ರಾಧ್ಯಕ್ಷ..?

ಪೊಲೀಸರು ಪ್ರಕರಣದ ತನಿಖೆ ನಡೆಸಬಹುದು. ಆದರೆ, ನಡ್ಡಾರನ್ನು ತನಿಖೆ/ವಿಚಾರಣೆಗೆ ಕರೆಸಬಾರದು. ಅವರ ವಿರುದ್ದ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ನಿರ್ದೇಶನ ನೀಡಿದ ನ್ಯಾಯಪೀಠ, ಪ್ರಕರಣದ ಮೂಲ ದೂರುದಾರರಾದ ಕಲಬುರಗಿಯ ಪ್ರವೀಣ್ ಕುಮಾರ್ ಪಾಟೀಲ್‌ಗೆ ನೋಟಿಸ್ ಜಾರಿಗೊಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ