ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!

Published : Nov 23, 2024, 10:55 AM IST
ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!

ಸಾರಾಂಶ

ಕೋವಿಡ್ ಚಿಕಿತ್ಸೆಗೆ ಸಂಬಂಧಪಟ್ಟ ವರದಿ ಬಗ್ಗೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರಿಗೆ ನೇರವಾಗಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ.

ನವದೆಹಲಿ (ನ.23): ಕೋವಿಡ್ ಚಿಕಿತ್ಸೆಗೆ ಸಂಬಂಧಪಟ್ಟ ವರದಿ ಬಗ್ಗೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರಿಗೆ ನೇರವಾಗಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ.

ಈ ಹಿಂದೆ ರಾಜ್ಯ ವಿಧಾನಸಭೆ ಉಪ ಚುನಾವಣೆ ವೇಳೆ ಸಚಿವರು ಪ್ರಚಾರ ಭಾಷಣದಲ್ಲಿ 'ಬಿಜೆಪಿ ಸರ್ಕಾರದ ಅವಧೀಲಿ ಕೋವಿಡ್ ಹಗರಣ ನಡೆದಿದೆ' ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸುವಾಗ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವರದಿ ಬಗ್ಗೆ ಪ್ರಸ್ತಾಪಿಸಿದ್ದು ವಿವಾದ ಹುಟ್ಟು ಹಾಕಿತ್ತು.ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇದಕ್ಕೆ ಸ್ಪಷ್ಟನೆ ನೀಡಿದ್ದಲ್ಲದೆ, ವಾಸ್ತವದಲ್ಲಿ ತಾವೇನು ಮಾತನಾಡಿದ್ದೇನೆ ಎಂಬುದರ ಬಗ್ಗೆ ವಿವರಿಸಿ ನ್ಯಾಯಮೂರ್ತಿ ಕುನ್ಹಾ ಅವರಿಗೆ ಪತ್ರ ಬರೆದಿದ್ದಾರೆ. ಅಲ್ಲದೇ, ವಿವಾದಾತ್ಮಕ ಹೇಳಿಕೆಯಿಂದ ತಮ್ಮ ಮನಸ್ಸಿಗೆ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇಂತಿದೆ ಪತ್ರದ ಸಾರಾಂಶ: ನನ್ನ ಸುದೀರ್ಘ ವರ್ಷಗಳ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಯಾವತ್ತೂ ಪ್ರತ್ಯಕ್ಷ-ಪರೋಕ್ಷವಾಗಿ ನ್ಯಾಯಾಂಗದ ಸದಸ್ಯರ ಖ್ಯಾತಿಗೆ ಚ್ಯುತಿ ಬರುವಂತೆ ನಡೆದುಕೊಂಡಿಲ್ಲ ಮತ್ತು ಹೇಳಿಕೆಯನ್ನೂ ನೀಡಿಲ್ಲ. ಎಂದು ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ'ಕುನ್ಹಾ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ನ್ಯಾಯಾಂಗ ಮತ್ತು ನ್ಯಾ.ಕುನ್ಹಾ ಅವರಲ್ಲಿ ಗೌರವವಿದೆ: ನಾನು ಇತ್ತೀಚೆಗೆ ನೀಡಿದ ಹೇಳಿಕೆ ಮೇಲ್ನೋಟಕ್ಕೆ ವಿವಾದ ಹುಟ್ಟುಹಾಕಿದೆ. ಆದರೆ, ಯಾವತ್ತೂ ನ್ಯಾಯಾಂಗದ ಸದಸ್ಯರ ಖ್ಯಾತಿ ತಗ್ಗಿಸುವ ಪ್ರವೃತ್ತಿ ತೋರಿಲ್ಲ. ನ್ಯಾಯಾಂಗ ಮತ್ತು ತಮ್ಮ ಬಗ್ಗೆ ಈಗಲೂ ಗೌರವವಿದೆ.ನ್ಯಾಯಾಂಗ ಮತ್ತು ಗೌರವಾನ್ವಿತ ನ್ಯಾಯಾಧೀಶರು ಸಂವಿಧಾನದ ಕವಚವಾಗಿದ್ದಾರೆ. ನ್ಯಾಯದಾನದ ಪವಿತ್ರ ಕರ್ತವ್ಯದಲ್ಲಿ ಪ್ರಮುಖ ಪಾತ್ರ ಹೊಂದಿದವರೆಂದು ನಂಬಿದವನಾಗಿದ್ದೇನೆ. ಆದರೆ, ತಮ್ಮ ನೇತೃತ್ವದ ಸಮಿತಿ ವರದಿ ಉಲ್ಲೇಖಿಸಿ ಇತ್ತೀಚೆಗೆ ನೀಡಿದ ಹೇಳಿಕೆ ಅವಹೇಳನದಿಂದ ಕೂಡಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕಾಗಿ ತಮ್ಮಲ್ಲಿ ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದ್ದರಿಂದ ಬಿಪಿಎಲ್‌ ಕಾರ್ಡ್‌ ಕಡಿತ: ಪ್ರಲ್ಹಾದ್‌ ಜೋಶಿ ಕಿಡಿ

ಖ್ಯಾತಿ ಕುಗ್ಗಿಸುವ ಯತ್ನ ನನ್ನದಾಗಿರಲಿಲ್ಲ: ಸಿಎಂ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರ ತರಾತುರಿಯಲ್ಲಿ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರಿಂದ ವರದಿ ತರಿಸಿಕೊಂಡಿದೆ ಎಂದು ಹೇಳಿದ್ದೇನೆ ಹೊರತು ತಮ್ಮ ಮೇಲೆ ಯಾವುದೇ ವೈಯಕ್ತಿಕ ಹೇಳಿಕೆ ನೀಡಿಲ್ಲ. ತಮಗೆ ಮತ್ತು ಆಯೋಗಕ್ಕೆ ಅಪಕೀರ್ತಿ ತರಲು ಅಥವಾ ಜನರ ಮನಸ್ಸಿನಲ್ಲಿ ನಿಮ್ಮ ಇಮೇಜ್ ಕಡಿಮೆ ಮಾಡುವ ಉದ್ದೇಶದ್ದೂ ಅಲ್ಲ. ಆಯೋಗದ ಸದಸ್ಯರಾಗಿ ತಮ್ಮ ಕರ್ತವ್ಯ ನಿರ್ವಹಣೆ ಮತ್ತು ನಿಷ್ಪಕ್ಷಪಾತವನ್ನು ಅನುಮಾನಿಸಲು ನನಗೆ ಯಾವುದೇ ಕಾರಣವಿಲ್ಲ ಎಂಬುದನ್ನು ಈ ಮೂಲಕ ನೇರವಾಗಿ ತಮ್ಮ ಗಮನಕ್ಕೆ ತರಬಯಸಿದ್ದೇನೆ. ನನ್ನ ಹೇಳಿಕೆಗಳು ತಮಗೆ ಯಾವುದೇ ನೋವು ಅಥವಾ ಅನುಮಾನ ಉಂಟುಮಾಡಿದ್ದರೆ ಅದಕ್ಕೆ ವಿಷಾದಿಸುತ್ತೇನೆ ಮತ್ತು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಸಚಿವ ಜೋಶಿ ಅವರು ನ್ಯಾಯಮೂರ್ತಿ ಮೈಕಲ್ ಡಿ'ಕುನ್ಹಾ ಅವರಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ತನಿಖೆಗೆ ಶಿಫಾರಸು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್