ಇಂಡಿ ಒಕ್ಕೂಟದ ದೋಸ್ತಿಯನ್ನು ಕಾವೇರಿ ನೀರಿಗಾಗಿ, ಮೇಕೆದಾಟು ಯೋಜನೆಗಾಗಿ ಬಳಸಿ: ಸಂಸದ ತೇಜಸ್ವಿ ಸೂರ್ಯ

Published : Sep 29, 2023, 01:01 PM IST
ಇಂಡಿ ಒಕ್ಕೂಟದ ದೋಸ್ತಿಯನ್ನು ಕಾವೇರಿ ನೀರಿಗಾಗಿ, ಮೇಕೆದಾಟು ಯೋಜನೆಗಾಗಿ ಬಳಸಿ: ಸಂಸದ ತೇಜಸ್ವಿ ಸೂರ್ಯ

ಸಾರಾಂಶ

ಕರ್ನಾಟಕ ಕಾಂಗ್ರೆಸ್‌ ಹಾಗೂ ತಮಿಳುನಾಡಿನ ಡಿಎಂಕೆ ತಮ್ಮ ಇಂಡಿ ಒಕ್ಕೂಟದ ದೋಸ್ತಿಯನ್ನು ಕಾವೇರಿ ನೀರು ಉಳಿಸಲು ಹಾಗೂ ಮೇಕೆದಾಟು ಯೋಜನೆಗೆ ಬಳಸಬೇಕು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

ಬೆಂಗಳೂರು (ಸೆ.29): ರಾಜ್ಯದಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ನಿಯಂತ್ರಣಾ ಸಮಿತಿಯ ಮುಂದೆ ಸರಿಯಾಗಿ ವಾದ ಮಂಡನೆಯಲ್ಲಿ ವಿಫಲವಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜಕೀಯ ಕಾರಣಕ್ಕಾಗಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಇದರ ಬದಲು ಕಾಂಗ್ರೆಸ್‌ ಹಾಗೂ ಡಿಎಂಕೆ ಇಂಡಿ ಒಕ್ಕೂಟದ ಭಾಗವಾಗಿದ್ದು, ತಮ್ಮ ದೋಸ್ತಿಯನ್ನು ಕಾವೇರಿ ನೀರನ್ನು ಉಳಿಸಿ ರೈತರ ಸಂಕಷ್ಟವನ್ನು ದೂರ ಮಾಡಿ. ಇಂಡಿ ಒಕ್ಕೂಟದ ದೋಸ್ತಿ ಮೂಲಕ ತಮಿಳುನಾಡು ಸಿಎಂ ಸ್ಟಾಲಿನ್‌ಗೊಂದಿಗೆ ಮಾತನಾಡಿ ಕಾವೇರಿ ನೀರನ್ನು ಉಳಿಸಿ, ಮೇಕೆದಾಟು ಯೋಜನೆಗೆ ಅನುಮತಿ ಪಡೆದುಕೊಂಡು ಬನ್ನಿ ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ನಾಡಿನ ಜೀವನದಿ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದು, ಬಿಜೆಪಿಯೂ ಕೂಡ ಬೆಂಬಲ ನೀಡುತ್ತಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಕಾವೇರಿ ನದಿ ನಿರಿನ ವಸ್ತುಸ್ಥಿತಿಯ ಬಗ್ಗೆ ತಿಳಿಸಿಕೊಡುವಲ್ಲಿ ವಿಫಲವಾಗಿದೆ. ರಾಜ್ಯ ಸರ್ಕಾರ ಕಾವೇರಿ ಪ್ರಾಧಿಕಾರ ಹಾಗೂ ನಿಯಂತ್ರಣ ಸಮಿತಿಯ ಮುಂದೆ ವಾದ ಮಂಡನೆ ಮಾಡದೇ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ. ನಾಡು, ನುಡಿ ಹಾಗೂ ಜಲ ಸಂರಕ್ಷಣೆಯಲ್ಲಿ ರಾಜಕೀಯ ಮಾಡಬಾರದು ಎಂಬುದನ್ನು ತಿಳಿದುಕೊಳ್ಳದೇ ಆಡಳಿತ ಕಾಂಗ್ರೆಸ್‌ ಸರ್ಕಾರ ರಾಜಕೀಯವನ್ನು ಬೆರೆಸಿ ತಮ್ಮ ವಿಫಲತೆಗಳನ್ನು ಮುಚ್ಚಿಟ್ಟು ಇನ್ನೊಬ್ಬರ ಮೇಲೆ ಗೂಬೆ ಕೂರಿಸಲು ಹೊರಟಿದೆ ಎಂದರು.

ಕರ್ನಾಟಕ ಬಂದ್‌ ಬೆನ್ನಲ್ಲೇ ಅ.5ರಂದು ಕೆಆರ್‌ಎಸ್‌ಗೆ ಮುತ್ತಿಗೆಗೆ ಕರೆಕೊಟ್ಟ ವಾಟಾಳ್‌ ನಾಗರಾಜ್‌

ಕಳೆದ 15 ದಿನಗಳ ಹಿಂದೆ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿ ಮಾಡಿದ್ದೇವೆ. ಮತ್ತೊಮ್ಮೆ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದೇವೆ. ಜೊತೆಗೆ, ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಸಂಸದರೊಂದಿಗೆ ಜಂಟಿ ಸಭೆಯನ್ನು ಕರೆದು ಕೇಂದ್ರ ಸಚಿವರನ್ನೂ ಭೇಟಿ ಮಾಡಿದ ನಂತರ ಪುನಃ ಮಾಧ್ಯಮಗಳ ಮುಂದೆ ಬಂದು ಬಿಜೆಪಿಯ 25 ಸಂಸದರು ಏನೂ ಮಾಡ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಇದು ರಾಜಕಾರಣವಲ್ಲದೇ ಬೇರೇನು ಹೇಳಿ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಕರ್ನಾಟಕ ಮಾಡಿದ ವಾದದ ಬಗ್ಗೆ ಸಂಸದರು ಮಾತನಾಡಿದ್ದಾರೆ. ರಾಜ್ಯದಲ್ಲಿ ನೀರು ಕಡಿಮೆಯಾಗಿದ್ದರ ಬಗ್ಗೆ ಧ್ವನಿ ಎತ್ತಿದ್ದಾರೆ. ಕೇಂದ್ರ ಸರ್ಕಾರದ ಅಧಿಕಾರಿಗಳು ಸಿಡಬ್ಲ್ಯೂಎಂಎ ಮುಂದೆ ಚರ್ಚೆ ಮಾಡಿದ್ದಾರೆ. ಈ ವಿಚಾರವನ್ನು ಸಿಎಂ ಹಾಗೂ ಡಿಸಿಎಂ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದರು.

ದೋಸ್ತಿಯನ್ನು ರಾಜಕಾರಣಕ್ಕೆ ಬಿಟ್ಟು ಕಾವೇರಿಗಾಗಿ ಬಳಸಿ: ಕಾಂಗ್ರೆಸ್‌ ಹಾಗೂ ಡಿಎಂಕೆ ಇಂಡಿ ಒಕ್ಕೂಟದಲ್ಲಿವೆ. 2024 ಲೋಕಸಭಾ ಚುನಾವಣೆಯ ನಿಟ್ಟಿನಲ್ಲಿ ಒಗ್ಗಟ್ಟಾಗಿದ್ದಾರೆ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ನೇರವಾಗಿ ಮಾತನಾಡಿದ ರಾಜ್ಯದ ಹಿತಕ್ಕಾಗಿ ನಿಮ್ಮ ದೋಸ್ತಿಯನ್ನು ಬಳಕೆ ಮಾಡಿ. ಇನ್ನು ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಕ್ಯಾತೆ ತೆಗೆಯದಂತೆ ಎನ್‌ಒಸಿ ಪಡೆದು ಜಲಾಶಯ ನಿರ್ಮಾಣ ಮಾಡಬೇಕು. ಕಾವೇರಿ ನದಿ ನೀರಿನ ವಿಚಾರವಾಗಿ ನಾವೆಲ್ಲರೂ ನಿಮ್ಮ ಜೊತೆಗೆ ಪಕ್ಷಾತೀತವಾಗಿ ಬೆಂಬಲ ನೀಡುತ್ತೇವೆ ಎಂದರು.

ಇಂದಿನ ಕರ್ನಾಟಕ ಬಂದ್‌ಗೆ ಬಿಜೆಪಿಯಿಂದ ಪೂರ್ಣ ಬೆಂಬಲ: ಬೊಮ್ಮಾಯಿ

ಕಾವೇರಿ ನೀರಿನ ರಿಯಾಲಿಟಿ ಚೆಕ್‌ಗೆ ಬರುವಂತೆ ಅರ್ಜಿ ಹಾಕಲಿ:  ನಿನ್ನೆ ಲೆಹರ್‌ ಸಿಂಗ್‌ ಅವರು ತಮಿಳುನಾಡು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮಾತನಾಡಲು ಹೋದಾಗ ಅವರು ಬಿಜೆಪಿಯವರು ಎನ್ನುವ ಕಾರಣಕ್ಕೆ 2 ದಿನಗಳು ಕಾಯುತ್ತಾ ಕುಳಿತರೂ ಭೇಟಿಗೆ ಅವಕಾಶ ಕೊಡಲಿಲ್ಲ. ಆದರೆ, ನೀವು ಹೋದರೆ ನಿಮಗೆ ತಕ್ಷಣವೇ ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಾರೆ. ಇನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಎಸಿ ಕಚೇರಿಯಲ್ಲಿ ಕುಳಿತುಕೊಂಡು ನೀರು ಬಿಡಿ ಎಂದು ಆದೇಶ ಕೊಡುವುದು ಸರಿಯಲ್ಲ. ಜಲಾಶಯಗಳನ್ನು ನೇರವಾಗಿ ಭೇಟಿ ಮಾಡಿ ಪರಿಶೀಲಿಸಿ ನೀರು ಬಿಡುವುದಕ್ಕೆ ಆದೇಶ ಕೊಡಬೇಕು. ರಿಯಾಲಿಟಿ ಪರೀಕ್ಷೆ ಮಾಡದೇ ನೀರು ಬಿಡಿ ಎಂದು ಹೇಳುವುದು ಬಿಟ್ಟು ಫೀಲ್ಡ್‌ ವಿಸಿಟ್‌ ಮಾಡಿ ಆದೇಶ ಕೊಡಬೇಕು. ಈ ಬಗ್ಗೆ ರಾಜ್ಯ ಸರ್ಕಾರ ಅರ್ಜಿಯನ್ನು ಹಾಕಬೇಕು. ಇದಕ್ಕೆ ರಾಜ್ಯದ ಎಲ್ಲ ಸಂಸದರು ರಾಜ್ಯಕ್ಕೆ ಬೆಂಬಲ ಕೊಡುತ್ತಾರೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಹುಬ್ಬಳ್ಳೀಲಿ ‘ಫ್ಲೈ-91’ ಗೆ 3ನೇ ಸಲ ಲ್ಯಾಂಡಿಂಗ್‌ ಸಮಸ್ಯೆ!
ಬೆಂಗಳೂರು ಉದ್ಯಮಿ ಹನಿಟ್ರಾಪ್ ಬಲೆ, ₹1.5 ಕೋಟಿಗೆ ಬೇಡಿಕೆ ಇಟ್ಟ ಇನ್‌ಫ್ಲುಯೆನ್ಸರ್ ವಿರುದ್ಧ ಕೇಸ್