ಹಸಿರು ಪಟಾಕಿ ಮಾತ್ರ ಬಳಸಿ: ಸಿಎಂ ಸಿದ್ದರಾಮಯ್ಯ ಮನವಿ

Published : Nov 13, 2023, 07:25 AM IST
ಹಸಿರು ಪಟಾಕಿ ಮಾತ್ರ ಬಳಸಿ: ಸಿಎಂ ಸಿದ್ದರಾಮಯ್ಯ ಮನವಿ

ಸಾರಾಂಶ

ರಾಜ್ಯದಲ್ಲಿ ಪಟಾಕಿಗಳಿಂದ ಉಂಟಾಗುವ ಶಬ್ದ ಮಾಲಿನ್ಯ, ಪರಿಸರ ಮಾಲಿನ್ಯ ಹಾಗೂ ಅಗ್ನಿ ಅವಘಡ ತಪ್ಪಿಸಲು ಹಸಿರು ಪಟಾಕಿ ಮಾತ್ರ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಬೆಂಗಳೂರು (ನ.13): ರಾಜ್ಯದಲ್ಲಿ ಪಟಾಕಿಗಳಿಂದ ಉಂಟಾಗುವ ಶಬ್ದ ಮಾಲಿನ್ಯ, ಪರಿಸರ ಮಾಲಿನ್ಯ ಹಾಗೂ ಅಗ್ನಿ ಅವಘಡ ತಪ್ಪಿಸಲು ಹಸಿರು ಪಟಾಕಿ ಮಾತ್ರ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ರಾಜ್ಯದ ಜನತೆಗೆ ವಿಡಿಯೋ ಸಂದೇಶದ ಮೂಲಕ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿರುವ ಅವರು, ದೀಪಾವಳಿ ಸರ್ವರೂ ಕೂಡಿ ಸಂಭ್ರಮಿಸುವ ಹಬ್ಬ. ಅಜ್ಞಾನದ ಅಂಧಕಾರವನ್ನು ಹೋಗಲಾಡಿಸಿ, ಜ್ಞಾನದ ದೀಪ ಬೆಳಗುವ ಹಬ್ಬ. ಹಬ್ಬದ ಸಂಭ್ರಮವು ನಮ್ಮ ಮೈ ಮರೆವಿನ ನಿರ್ಲಕ್ಷ್ಯದಿಂದ ಸಂಭವಿಸುವ ಅವಘಡಗಳಿಂದ ಮಂಕಾಗದಂತೆ ಎಚ್ಚರಿಕೆ ವಹಿಸೋಣ ಎಂದು ಸಲಹೆ ನೀಡಿದ್ದಾರೆ.

ಮೋದಿಗೆ ಪತ್ರ ಬರೆದ ಮಂಡ್ಯ ಟೆಕಿ ಮನೆಗೆ ಚರಂಡಿ ಭಾಗ್ಯ; ಆನ್‌ಲೈನ್ ದೂರಿಗೆ ಸ್ಪಂದಿಸಿದ ಪಿಎಂ!

ಪಟಾಕಿ ವಿಚಾರದಲ್ಲಿ ಹಿರಿ ಕಿರಿಯರೆಲ್ಲರೂ ಮುನ್ನಚ್ಚರಿಕೆ ವಹಿಸಬೇಕು. ಪಟಾಕಿಗಳಿಂದ ಉಂಟಾಗುವ ಶಬ್ದ ಮಾಲಿನ್ಯ, ಪರಿಸರ ಮಾಲಿನ್ಯ ಹಾಗೂ ಅಗ್ನಿ ಅವಘಡ ತಪ್ಪಿಸಲು ಹಸಿರು ಪಟಾಕಿಗೆ ಮಾತ್ರ ಅನುಮತಿ ನೀಡಲಾಗಿದೆ. ದೀಪಾವಳಿ ಹಬ್ಬದ ಹೆಸರಿನಲ್ಲಿ ಸಿಡಿಸುವ ಪಟಾಕಿಯ ರಾಸಾಯನಿಕಗಳು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತವೆ. ವಿಶೇಷವಾಗಿ ಉಸಿರಾಟದ ಸಮಸ್ಯೆ ಇರುವವರು, ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆ ಇರುವವರಿಗೆ ಪಟಾಕಿಗಳಿಂದ ಉಂಟಾಗುವ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಗಂಭೀರ ತೊಂದರೆ ನೀಡುತ್ತದೆ. ಪ್ರಾಣಿ- ಪಕ್ಷಿಗಳು ಇದರಿಂದ ಮೂಕ ವೇದನೆ ಅನುಭವಿಸುತ್ತವೆ. ಹಾಗಾಗಿ ನಾಗರಿಕರು ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಮಾತ್ರ ಬಳಸಬೇಕು ಎಂದು ಅವರು ವಿನಂತಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ