ಕೊರೋನಾ ಲಸಿಕೆ ಪ್ರಯೋಗ : ಅಸಮಾಧಾನ ಹೊರಹಾಕಿದ ಯು.ಟಿ ಖಾದರ್

Suvarna News   | Asianet News
Published : Jan 16, 2021, 02:24 PM IST
ಕೊರೋನಾ ಲಸಿಕೆ ಪ್ರಯೋಗ : ಅಸಮಾಧಾನ ಹೊರಹಾಕಿದ ಯು.ಟಿ ಖಾದರ್

ಸಾರಾಂಶ

ರಾಜ್ಯಕ್ಕೆ ಕೊರೋನಾ ಲಸಿಕೆ ತರಲಾಗಿದ್ದು ಇದೀಗ ರಾಜ್ಯದ ವಿವಿಧೆಡೆ ಲಸಿಕೆ  ವಿತರಣೆ ನಡೆಯುತ್ತಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಯು ಟಿ ಖಾದರ್ ಅಸಮಾಧಾನ ಹೊರಹಾಕಿದ್ದಾರೆ. 

ಬೆಂಗಳೂರು (ಜ.16):  ಡಿ ಗ್ರೂಪ್ ನೌಕರರ ಮೇಲೆ ಕೊರೋನಾ ಲಸಿಕೆ ಪ್ರಯೋಗಕ್ಕೆ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟ್ವಿಟರ್‌ನಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಕೊರೋನಾ ಲಸಿಕೆ ಪ್ರಯೋಗದ ಬಗ್ಗೆ ಅಸಮಾಧಾನ  ವ್ಯಕ್ತಪಡಿಸಿದ್ದಾರೆ. 

ಲಸಿಕೆ ಬಂದಿರುವುದು ಸಂತೋಷವಾಗಿದೆ.  ಆದರೆ ಬಡಪಾಯಿ ಡಿ.ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುತ್ತಿರುವುದು ಸರಿಯಲ್ಲ ಎಂದಿದ್ದಾರೆ. 

ಕೋವಿಡ್ ಲಸಿಕೆ ಪಡೆಯಲು ಸ್ಟಾಫ್ ನರ್ಸ್‌ ಹಿಂದೇಟು ... 

ಡಿ ಗ್ರೂಪ್ ನೌಕರರ ಬದಲು ಮೊದಲಿಗೆ ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಲಸಿಕೆ ಪಡೆದುಕೊಳ್ಳಲಿ ಎಂದು ಯು ಟಿ ಖಾದರ್ ಹೇಳಿದ್ದಾರೆ. 

 

ಈ ಮೂಲಕ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದು ಮಾಜಿ ಸಚಿವರು ಟ್ವಿಟ್ಟರ್ನಲ್ಲಿ ಮನವಿ ಮಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ