
ಉತ್ತರ ಕನ್ನಡ (ಸೆ.5): ಹಿರಿಯ ಶಾಸಕರಾದ ಆರ್ವಿ ದೇಶಪಾಂಡೆಗೆ ಇನ್ನು ಮುಂದೆ ಪ್ರಸೂತಿ, ಹೆರಿಗೆ ತಜ್ಞರು ಎಂದು ಕರೆಯಬೇಕಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ಶಾಸಕ ಸುನಿಲ್ ಹೆಗಡೆ ಹೇಳಿದ್ದಾರೆ.
ಹಿರಿಯ ಪತ್ರಕರ್ತೆಯ ಜೊತೆ ಅವಹೇಳನಕಾರಿ ರೀತಿಯಲ್ಲಿ ವರ್ತಿಸಿದ ಹಿನ್ನೆಲೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಳಿಯಾಳ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ದೇಶಪಾಂಡೆ ಮಾಡಿರುವ ಕರ್ಮಕ್ಕೆ ಹಳಿಯಾಳ, ದಾಂಡೇಲಿ, ಜೊಯಿಡಾ ತಾಲೂಕು ತಲೆ ತಗ್ಗಿಸುವಂತಾಗಿದೆ. ಪತ್ರಕರ್ತೆಯ ಸಾಮಾಜಿಕ ಕಳಕಳಿಯ ಪ್ರಶ್ನೆಗೆ ತದ್ವಿರುದ್ಧವಾಗಿ, ಅನುಚಿತವಾಗಿ ಉತ್ತರಿಸುವ ಮೂಲಕ ಪತ್ರಿಕಾ ರಂಗದ ಸ್ವಾತಂತ್ರ್ಯ, ಗೌರವಕ್ಕೂ ದೇಶಪಾಂಡೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದರು.
ಸೋನಿಯಾ, ಪ್ರಿಯಾಂಕಾ ಗಾಂಧಿಗೆ ಹೆರಿಗೆ ಮಾಡಿಸುವುದಾಗಿ ಅವರ ಬಳಿ ಹೋಗಿ ಹೇಳಲಿ. ಒಳ್ಳೆಯ ರೀತಿ ಮಾತನಾಡಿ ಮಹಿಳೆಯರಿಗೆ ಗೌರವ ನೀಡುವುದನ್ನು ಶಾಸಕರು ಕಲೆಯಲಿ ಎಂದು ಸುನೀಲ್ ಹೆಗಡೆ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸೀಮಗೌಡ್ರು, ಬಿಜೆಪಿ ಹಳಿಯಾಳ ಅಧ್ಯಕ್ಷ ವಿಠ್ಠಲ ಸಿದ್ದನ್ನವರ, ದಾಂಡೇಲಿ ಅಧ್ಯಕ್ಷ ಬುದ್ದವಂತ ಪಾಟೀಲ ಮತ್ತಿತರರು ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ