ಮದುವೆ ದಿಬ್ಬಣದ ವಾಹನ ಹಾಗೂ ಕಾರಿನ ನಡುವೆ ಅಪಘಾತ, ಕಾಂಗ್ರೆಸ್ ನಾಯಕನ ಸಾವು!

By Suvarna NewsFirst Published May 23, 2022, 10:38 AM IST
Highlights

ಮದುವೆ ದಿಬ್ಬಣದ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ನಾಯಕ ಮಂಜುನಾಥ ಬಿ ಗೌಡ ಕಬ್ಬಿನ್ಮನೆ ಸಾವಿಗೀಡಾಗಿದ್ದಾರೆ.

ಸಿದ್ದಾಪುರ (ಮೇ.23): ಮದುವೆ ದಿಬ್ಬಣದ ಜನರನ್ನು ಕೊಂಡೊಯ್ಯುತ್ತಿದ್ದ ಮಾರುತಿ ಇಕೊ ( Maruti Eco) ಮತ್ತು ಎದುರುಗಡೆಯಿಂದ ಬಂದ ಕಾರು (Car)  ಢಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು 8ಕ್ಕೂ  ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ಧಾಪುರ ತಾಲ್ಲೂಕಿನ (Siddapur) ಶಿರೂರು (Shirur) ಬಳಿ ನಡೆದಿದೆ.

 ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ ಗೌಡ ಕಬ್ಬಿನ್ಮನೆ (Manjunath B Gowda Kabbinmane ) ಮೃತಪಟ್ಟ ದುರ್ದೈವಿ. ಮದುವೆ ಮುಗಿಸಿ ದಿಬ್ಬಣದ ಜನರನ್ನು ಇಕೋ ವಾಹನದಲ್ಲಿ ಕರೆದುಕೊಂಡು ತೆರಳುವಾಗ ಎದುರಿನಿಂದ ಬಂದ ಕಾರಿಗೆ ಢಿಕ್ಕಿಯಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಎರಡೂ ವಾಹನದಲ್ಲಿ 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಕೆಲವರು ಗಂಭೀರಗೊಂಡಿದ್ದಾರೆ. ಎಲ್ಲರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

click me!