ಹೈಸ್ಕೂಲ್‌ ಮಕ್ಕಳ ಪೋಷಕರಿಗೆ ಆದ್ಯತೆಯ ಮೇರೆಗೆ ಲಸಿಕೆ

Kannadaprabha News   | Asianet News
Published : Aug 10, 2021, 07:25 AM IST
ಹೈಸ್ಕೂಲ್‌ ಮಕ್ಕಳ ಪೋಷಕರಿಗೆ ಆದ್ಯತೆಯ ಮೇರೆಗೆ ಲಸಿಕೆ

ಸಾರಾಂಶ

ಅನುದಾನ ರಹಿತ ಶಾಲೆಗಳ 9 ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೋಷಕರಿಗೆ ಕೋವಿಡ್ ಲಸಿಕೆ ಕೋವಿಡ್‌ ಲಸಿಕೆ ಪಡೆಯದಿದ್ದರೆ ಅವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು (ಆ.10):  ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 9 ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೋಷಕರು ಈವರೆಗೆ ಕೋವಿಡ್‌ ಲಸಿಕೆ ಪಡೆಯದಿದ್ದರೆ ಅವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಮಕ್ಕಳ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿ, ಲಸಿಕೆ ಪಡೆಯದವರ ಪಟ್ಟಿತಯಾರಿಸಿ ಆರೋಗ್ಯ ಇಲಾಖೆಗೆ ನೀಡುವಂತೆ ಶಾಲೆಯ ಮುಖ್ಯಸ್ಥರಿಗೆ ಸೂಚಿಸುವಂತೆ ಶಿಕ್ಷಣ ಇಲಾಖೆಯನ್ನು ಆರೋಗ್ಯ ಇಲಾಖೆ ಕೋರಿದೆ.

ಕರ್ನಾಟಕದಲ್ಲಿ ಹೊಸದಾಗಿ 1,186 ಕೊರೋನಾ ಕೇಸ್, 24 ಮಂದಿ ಸಾವು

ಹಾಗೆಯೇ ಶಿಕ್ಷಕರು, ಭೋಧಕೇತರ ಸಿಬ್ಬಂದಿಗಳು ಇನ್ನೂ ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಬೇಕು ಎಂದು ಆರೋಗ್ಯ ಇಲಾಖೆ ಪುನರುಚ್ಚರಿಸಿದೆ. ಆಗಸ್ಟ್‌ 23 ರಿಂದ ಹೈಸ್ಕೂಲ್‌ ತರಗತಿ ತೆರೆಯಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಲಸಿಕಾಕರಣಕ್ಕೆ ಒತ್ತು ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!