
ಬೆಂಗಳೂರು, (ಆ.18): ರಾಜ್ಯದಲ್ಲಿ ಮತ್ತೆ ವಿವಿಧ ಸಮುದಾಯಗಳ ಮೀಸಲಾತಿ ಸದ್ದು ಕೇಳಿಬರುತ್ತಿದೆ. ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಮುಂದೆ ದೊಡ್ಡ ಸವಾಲುಗಳೇ ಎದುರಾಗಲಿವೆ.
ಹೌದು...ಪಂಚಮಸಾಲಿ ಸಮುದಾಯಕ್ಕೆ ಸೆ.15ರ ಒಳಗೆ 2A ಮೀಸಲಾತಿ ಬೇಡಿಕೆ ಈಡೇರದಿದ್ದರೆ ಅ.1ರಿಂದ ಧರಣಿ ಸತ್ಯಾಗ್ರಹ ಮತ್ತೆ ಮುಂದುವರಿಯಲಿದೆ ಎಂದು ಸರ್ಕಾರಕ್ಕೆ ಈಗಾಗಲೇ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.
ಇದರ ಬೆನ್ನಲ್ಲೇ ಇದೀಗ ವಾಲ್ಮೀಕಿ ಸಮುದಾಯವೂ ಸಹ ತಮ್ಮ ಮೀಸಲಾತಿಯನ್ನು 7.5ಗೆ ಹೆಚ್ಚಳ ಮಾಡುವಂತೆ ಧ್ವನಿ ಎತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಸಮುದಾಯದ ನಿಯೋಗ ಸಿಎಂ ಭೇಟಿ ಮಾಡಿದೆ.
ಸೆ.15ರೊಳಗೆ ಮೀಸಲಾತಿ ಕಲ್ಪಿಸದಿದ್ದಲ್ಲಿ ಅ.1ರಿಂದ ಮತ್ತೆ ಪಂಚಮಸಾಲಿ ಹೋರಾಟ
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಗಳ ನೇತೃತ್ವದ ನಿಯೋಗ ಇಂದು (ಆ.18) ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿತು.
ಈ ವೇಳೆ ನಿಯೋಗ 7.5ರಷ್ಟು ಮೀಸಲಾತಿ ಹೆಚ್ಚಿಸುವ ಸಂಬಂಧ ಸಿಎಂಗೆ ಮನವಿ ಮಾಡಿದೆ. ಈ ನಿಯೋಗದಲ್ಲಿ ಸಮುದಾಯದ ಜನಪ್ರತಿನಿಧಿ ಇದ್ದರು.
ಈ ಹಿಂದೆ ಯಡಿಯುರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಪಂಚಮಸಾಲಿ, ಕುರುಬ ಹಾಗೂ ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಬೃಹತ್ ಪ್ರತಿಭಟನೆಗಳನ್ನು ಮಾಡಿದ್ದವು. ಆಗ ಬಿಎಸ್ವೈ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು.
ಆದ್ರೆ, ಇದೀಗ ಬಿಎಸ್ ಸಿಎಂ ಕುರ್ಚಿಯಿಂದ ಕೆಳಗಿಳಿದಿದ್ದು, ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಮೀಸಲಾತಿ ಕಂಟಕ ಎದುರಾಗಿದೆ. ಇದರಿಂದ ಬೊಮ್ಮಾಯಿ ಯಾವ ರೀತಿ ಪಾರಾಗುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ