ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕ ಬಂಧನ

Published : Jul 10, 2024, 01:56 PM IST
ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕ ಬಂಧನ

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ನನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು (ಜು.10): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (enforcement directorate- ED) ಬಂಧಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭಾರಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ನಿಟ್ಟಿನಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬುಧವಾರ ಬೆಳಗ್ಗೆ ಕಚೇರಿ ಮಹರ್ಷಿ ವಾಲ್ಮಿಕಿ ಅಭಿವೃದ್ದಿ ನಿಗಮದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ನಿಗಮದಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ಮಾಡಿದ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ಬಂಧಿಸಿದ್ದಾರೆ. ನಂತರ ಬಂಧಿತ ಹರೀಶ್‌ನನ್ನು ಶಾಂತಿನಗರ ಇಡಿ ಕಚೇರಿಗೆ ಕರೆತರಲಾಗಿದೆ.

ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇ.ಡಿ ದಾಳಿ

ವಾಲ್ಮೀಕಿ ಹಗರಣ ಪ್ರಕರಣದಲ್ಲಿ ಬಂಧಿತ ಹರೀಶ್ ಪಾತ್ರ ಏನು?
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸಿನ ವ್ಯವಹಾರದ ವೇಳೆ ಅಧಿಕಾರಿಗಳಿಗೆ ಸಚಿವ ನಾಗೇಂದ್ರನ ಆಪ್ತ ಹರೀಶ್ ಮೌಖಿಕವಾಗಿ ಒತ್ತಡ ಹಾಕಿರುತ್ತಾರೆ. ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.  ಇನ್ನು ಹೈದರಾಬಾದಿನ ಸತ್ಯನಾರಾಯಣ ವರ್ಮನಿಂದ ಬಂದ ಹಣ ಹರೀಶ್‌ಗೆ ಬಂದಿತ್ತು. ಏಪ್ರಿಲ್ ತಿಂಗಳ‌ 2ನೇ ವಾರ ಪದ್ಮನಾಭನಿಂದ 25 ಲಕ್ಷ ರೂ. ಹಣ ಹರೀಶ್ ಪಡೆದಿದ್ದನು. ವಾಲ್ಮೀಕಿ ನಿಗಮದ ಅಧಿಕಾರಿ ಪದ್ಮನಾಭನೇ ಖುದ್ದು ಹಣ ನೀಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಬೆಂಗಳೂರಿನ ಬಿಬಿಎಂಪಿ ಕಚೇರಿಯ ಶ್ರೀನಿಧಿ ಸಾಗರ್ ಹೊಟೇಲ್ ಬಳಿ ಹಣ ನೀಡಲಾಗಿದೆಯಂತೆ. ಬಳಿಕ ಹವಾಲಾ ಹಣ & ಚಿನ್ನದ ಬಿಸ್ಕೇಟ್ ಗಳನ್ನ ನಾಗೇಂದ್ರ ಪರ ಪಡೆದಿರುವ ಅನುಮಾನವಿದೆ. ಸಚಿವ ನಾಗೇಂದ್ರ ಪರ 50 ರಿಂದ 60 ಕೋಟಿ ವ್ಯವಹಾರ ಶಂಕೆಯಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗೆ ಹರೀಶ್ ನ ಬಂಧಿಸಿ ವಿಚಾರಣೆ ಮಾಡಲಾಗುತ್ತದೆ. ಹರೀಶ್ ಪ್ರತಿ ಹೇಳಿಕೆ ನಾಗೇಂದ್ರಗೆ ಮುಳುವಾಗುವ ಸಾಧ್ಯತೆಯಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
Karnataka News Live: ಪುರುಷರಿಗಿಲ್ಲದ ಕಟ್ಟುಪಾಡು ನಮಗೇಕೆ? - ಮಲೈಕಾ