ವಾಲ್ಮೀಕಿ ನಿಗಮ ಹಗರಣ: 'ನಾನೆಲ್ಲೂ ನಾಪತ್ತೆಯಾಗಿಲ್ಲ, ಊರಿಗೆ ಹೋಗಿದ್ದೆ' ಎಂದ ಅಧ್ಯಕ್ಷ ಬಸನಗೌಡ ದದ್ದಲ್

Published : Jul 16, 2024, 01:37 PM IST
ವಾಲ್ಮೀಕಿ ನಿಗಮ ಹಗರಣ: 'ನಾನೆಲ್ಲೂ ನಾಪತ್ತೆಯಾಗಿಲ್ಲ, ಊರಿಗೆ ಹೋಗಿದ್ದೆ' ಎಂದ ಅಧ್ಯಕ್ಷ ಬಸನಗೌಡ ದದ್ದಲ್

ಸಾರಾಂಶ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಎಸ್‌ಐಟಿ ಪೊಲೀಸರ ತನಿಖೆ ಎದುರಿಸಿದ ಬಳಿಕ ಜಾರಿ ನಿರ್ದೇಶನಾಲಯದ (ಇಡಿ) ಬಂಧನ ಭೀತಿಯಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ವಿಧಾನಸಭೆಯ ಅಧಿವೇಶನ ವೇಳೆ ಪ್ರತ್ಯಕ್ಷರಾದರು.

ಬೆಂಗಳೂರು (ಜು.16) ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಎಸ್‌ಐಟಿ ಪೊಲೀಸರ ತನಿಖೆ ಎದುರಿಸಿದ ಬಳಿಕ ಜಾರಿ ನಿರ್ದೇಶನಾಲಯದ (ಇಡಿ) ಬಂಧನ ಭೀತಿಯಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ವಿಧಾನಸಭೆಯ ಅಧಿವೇಶನ ವೇಳೆ ಪ್ರತ್ಯಕ್ಷರಾದರು.

ಇಡಿ ವಿಚಾರಣೆ ಬಳಿಕ ಎಸ್ಐಟಿ ವಿಚಾರಣೆ ಎದುರಿಸಿದ ದದ್ದಲ್ ಅವರು ತಮ್ಮ ಸ್ವಜಿಲ್ಲೆ ರಾಯಚೂರಿಗೆ ತೆರಳಿದ್ದರು. ಬಳಿಕ ಕಾಣದೇ ಇದ್ದಾಗ ನಾಪತ್ತೆಯಾಗಿದ್ದಾರೆ ಎಂಬ ದಟ್ಟ ವದಂತಿ ಹಬ್ಬಿತ್ತು. ಆದರೆ, ಸೋಮವಾರ ದಿಢೀರನೆ ವಿಧಾನಸೌಧಕ್ಕೆ ಆಗಮಿಸಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಕೆಲಕಾಲ ಸಮಾಲೋಚನೆ ನಡೆಸಿದರು.

 

ವಾಲ್ಮೀಕಿ ನಿಗಮ ಬಹುಕೋಟಿ ಹಗರಣ; ಸದನದಲ್ಲೂ ನಾಗೇಂದ್ರ ಪರ ಡಿ.ಕೆ. ಶಿವಕುಮಾರ್ ಬ್ಯಾಟಿಂಗ್‌!

\\Bನಾನು ನಾಪತ್ತೆಯಾಗಿಲ್ಲ- ದದ್ದಲ್‌: \\Bಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದದ್ದಲ್‌, ನಾನು ನಾಪತ್ತೆಯಾಗಿರಲಿಲ್ಲ. ಎರಡು ದಿನಗಳಿಂದ ನನ್ನ ಕ್ಷೇತ್ರಕ್ಕೆ ತೆರಳಿದ್ದೆ ಎಂದು ಸ್ಪಷ್ಟನೆ ನೀಡಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜಾರಿ ನಿರ್ದೇಶಾನಲಯದಿಂದ ಮತ್ತೆ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಿಳಿಸಿದರು.

\\Bಅಧಿವೇಶನ ಮುಗಿಯುವವರೆಗೆ ಬಂಧನ ಇಲ್ಲ?: \\Bಅಧಿವೇಶನ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಶಾಸಕರೂ ಆಗಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರಿಗೆ ಬಂಧನ ಭೀತಿ ಸ್ವಲ್ಪ ಮಟ್ಟಿಗೆ ದೂರವಾಗಿದೆ.

'ಕುಮಾರಸ್ವಾಮಿ ಕಸದ ಲಾರಿ ಓಡಿಸುತ್ತಿದ್ದವರು..' ಕಸ ವಿಲೇವಾರಿ ಟೆಂಡರ್‌ನಲ್ಲಿ 15000 ಕೋಟಿ ಲಂಚ ಆರೋಪಕ್ಕೆ ಡಿಕೆಶಿ ತಿರುಗೇಟು!

ಸದನ ಮುಗಿಯುವವರೆಗೆ ಇಡಿ ಅಧಿಕಾರಿಗಳು ಬಂಧನ ಮಾಡುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ದದ್ದಲ್‌ ಅವರನ್ನು ಬಂಧಿಸಬೇಕಿದ್ದರೆ ಸಭಾಧ್ಯಕ್ಷರ ಅನುಮತಿ ಪಡೆದುಕೊಳ್ಳಬೇಕು. ಸಭಾಧಕ್ಷರು ಬಂಧನಕ್ಕೆ ಅನುಮತಿ ನೀಡಿದರೆ ಮಾತ್ರ ದದ್ದಲ್‌ ಬಂಧನ ಸಾಧ್ಯತೆ ಇದೆ. ಇಲ್ಲವಾದ್ದಲ್ಲಿ ಅಧಿವೇಶನ ಮುಗಿಯುವವರೆಗೆ ಬಂಧನವಾಗುವುದಿಲ್ಲ ಎಂದು ಮೂಲಗಳು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: 4,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ