
ಹುಬ್ಬಳ್ಳಿ(ಸೆ.10): ಹುಬ್ಬಳ್ಳಿ- ಪುಣೆ ನಡುವೆ ಶೀಘ್ರದಲ್ಲೇ ವಂದೇ ಭಾರತ್ ರೈಲು ಪ್ರಾರಂಭವಾಗಲಿದೆ. ಹೌದು, ಬಹು ನಿರೀಕ್ಷೆಯ ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸೇವೆಯಿಂದ ಹುಬ್ಬಳ್ಳಿ, ಬೆಳಗಾವಿ ಸೇರಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಪುಣೆಗೆ ಸಂಚಾರ ನಡೆಸುವ ಜನರಿಗೆ ಸಹಾಯಕವಾಗಲಿದೆ. ಪ್ರತಿದಿನ ನೂರಾರು ಜನರು ಉಭಯ ರಾಜ್ಯಗಳ ಎರಡು ಪ್ರಮುಖ ನಗರಗಳ ನಡುವೆ ಸಂಚಾರ ನಡೆಸಲು ಅನುಕೂಲವಾಗಲಿದೆ. ಪುಣೆಯಿಂದ ಮುಂಬೈಗೆ ಮುಂದುವರಿದ ಪ್ರಯಾಣಕ್ಕೂ ಕೂಡಾ ಇದರಿಂದ ಅನುಕೂಲವಾಗಲಿದೆ.
ಕರ್ನಾಟಕದ ವಾಣಿಜ್ಯ ವಹಿವಾಟಿನ ಪ್ರಮುಖ ಕೇಂದ್ರವಾದ ಹುಬ್ಬಳ್ಳಿ ಮತ್ತು ಪುಣೆಯನ್ನು ಈ ರೈಲು ಸಂಪರ್ಕಿಸಲಿದೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೀರಜ್, ಸಾಂಗ್ಲಿ, ಸತಾರಾ, ಪುಣೆಯಲ್ಲಿ ಹುಬ್ಬಳ್ಳಿ-ಪುಣೆ ನಡುವಿನ ವಂದೇ ಭಾರತ್ ರೈಲು ನಿಲುಗಡೆ ಹೊಂದಿದೆ.
ವಂದೇ ಭಾರತ್ ರೈಲನ್ನು ಗೂಡ್ಸ್ ರೈಲಿನ ಎಂಜಿನ್ನಿಂದ ಎಳೆಸಿದ್ರು: ವಿಡಿಯೋ ನೋಡಿ
2 ತಿಂಗಳ ಹಿಂದೆಯೇ ಸಚಿವ ಪ್ರಹ್ಲಾದ ಜೋಶಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಹುಬ್ಬಳ್ಳಿಯಿಂದ ಪುಣೆಗೆ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ಮನವಿ ಮಾಡಿದ್ದರು. ಜೋಶಿ ಅವರ ಮನವಿಗೆ ಸ್ಪಂದಿಸಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶೀಘ್ರದಲ್ಲೇ ಸೇವೆ ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಜೋಶಿ ಅವರು ಭೇಟಿಯಾಗಿ ಚರ್ಚೆ ಕೂಡ ನಡೆಸಿದ್ದರು. ರೈಲು ಸಂಚಾರಕ್ಕೆ ಶೀಘ್ರವೇ ಚಾಲನೆ ದೊರೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ