ಕಾವೇರಿಗಾಗಿ ಕರ್ನಾಟಕ ಬಂದ್‌: ನಾಳೆ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ..!

Published : Sep 28, 2023, 09:07 AM ISTUpdated : Sep 28, 2023, 12:07 PM IST
ಕಾವೇರಿಗಾಗಿ ಕರ್ನಾಟಕ ಬಂದ್‌: ನಾಳೆ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ..!

ಸಾರಾಂಶ

ಮೈಸೂರು- ಬೆಂಗಳೂರು ಮಾರ್ಗದ ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈತರು ನಿರ್ಧರಿಸಿದ್ದಾರೆ. ಹೀಗಾಗಿ ಬೆಂಗಳೂರಿನಿಂದ ಮೈಸೂರಿಗೆ ಬರುವ ರೈಲಿನ ಸಮಯ ವ್ಯತ್ಯಯ ಉಂಟಾಗಲಿದೆ. ನಾಳಿನ ಕರ್ನಾಟಕ ಬಂದ್‌ಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ ಸೂಚಿಸಿದೆ. 

ಬೆಂಗಳೂರು(ಸೆ.28):  ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಾಳೆ(ಶುಕ್ರವಾರ) ಕರ್ನಾಟಕ ಬಂದ್‌ಗೆ ಕರೆ ನೀಡಿದ ಹಿನ್ನಲೆಯಲ್ಲಿ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೌದು, ಮೈಸೂರಿನಿಂದ ತೆರಳುವ ರೈಲು ತಡೆಯಲು ರೈತರು ಪ್ಲಾನ್ ಮಾಡಿಕೊಂಡಿದ್ದಾರೆ. ಹೀಗಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ರೈಲುಗಳ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. 

ಮೈಸೂರು- ಬೆಂಗಳೂರು ಮಾರ್ಗದ ರೈಲು ಸಂಚಾರಕ್ಕೆ ಅಡ್ಡಿಪಡಿಸಲು ರೈತರು ನಿರ್ಧರಿಸಿದ್ದಾರೆ. ಹೀಗಾಗಿ ಬೆಂಗಳೂರಿನಿಂದ ಮೈಸೂರಿಗೆ ಬರುವ ರೈಲಿನ ಸಮಯ ವ್ಯತ್ಯಯ ಉಂಟಾಗಲಿದೆ. ನಾಳಿನ ಕರ್ನಾಟಕ ಬಂದ್‌ಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ ಸೂಚಿಸಿದೆ. 

ಕಾವೇರಿ ನೀರಾವರಿ ವಿಚಾರ : ಎಲ್ಲಾ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಬೆಂಬಲ

ಮೈಸೂರಿನ ಪ್ರಯಾಣಿಕರಿಗೆ ತಟ್ಟಲಿರುವ ಬಂದ್ ಬಿಸಿ ತಟ್ಟಲಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಜೊತೆಗೆ ರೈಲು ಮಾರ್ಗ ತಡೆದು ರೈತರು ಪ್ರತಿಭಟನೆ ನಡೆಸಲಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ನಿಲ್ಲಿಸಿ, ರಾಜ್ಯದ ರೈತರನ್ನ ರಕ್ಷಿಸಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ ಕರ್ನಾಟಕ ಬಂದ್ ಬೆಂಬಲಿಸಿ ಎಂದು ಕರೆ ನೀಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?