
ಬೆಂಗಳೂರು (ಅ.22): ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ತಂದಂತೆ ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕನ್ನಡ ಒಕ್ಕೂಟ ನಾಯಕ ಮಾಜಿ ಶಾಸಕ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಪುರುಷರ ಪರವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಇಂದು 12 ಗಂಟೆಗೆ ಮೆಜೆಸ್ಟಿಕ್ನಲ್ಲಿ ಪುರುಷರ ಪರವಾಗಿ ಪ್ರತಿಭಟನೆ ನಡೆಸಲಿರುವ ವಾಟಾಳ್ ನಾಗರಾಜ್. ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವ ಮೂಲಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪುರುಷರಿಗೂ ಮೀಸಲಿಡುವಂತೆ ಸರ್ಕಾರಕ್ಕೆ ಒತ್ತಾಯ. ಮಹಿಳೆಯರಿಗಾಗಿ ಈಗಾಗಲೇ ಶಕ್ತಿ ಯೋಜನೆ, ಗೃಹಲಕ್ಷ್ಮೀ ಯೋಜನೆ ನೀಡಿರುವ ಸರ್ಕಾರ. ಆದರೆ ಪುರುಷರಿಗೆ ಯಾವುದೇ ಉಚಿತ ಯೋಜನೆ ನೀಡಿಲ್ಲ. ಕೇವಲ ಮಹಿಳೆಯರಿಗೆ ಉಚಿತ ಯೋಜನೆ ನೀಡುತ್ತಿರುವ ಸರ್ಕಾರ. ಸರ್ಕಾರದ ನಡೆ ಖಂಡಿಸಿದ ವಾಟಾಳ್ ನಾಗರಾಜ್. ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ನೀಡಿದಂತೆ ಪುರುಷರಿಗೆ "ನಾರಾಯಣ' ಯೋಜನೆ ನೀಡುವಂತೆ ವಾಟಾಳ್ ನಾಗರಾಜ್ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.
News Hour: ಬುರ್ಖಾ ಧರಿಸಿ ಪ್ರತಿಭಟಿಸಿದ ವಾಟಾಳ್, ಇದು ಹೆಂಗಸರ ಸರ್ಕಾರ ಎಂದ ಹೋರಾಟಗಾರರು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ