
ರಾಮನಗರ (ಮಾ.14): ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಶುಕ್ರವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವುದು ಕುತೂಹಲ ಮೂಡಿಸಿದೆ.
ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಒಡಿಶಾ ರಾಜ್ಯದ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಆಗಮಿಸಿದ ವೇಳೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿದ್ಯಾರಾಣಿ ದೇವರ ಫೋಟೋ ನೀಡಿ ಆಶೀರ್ವಾದ ಪಡೆದರು.
ಇದನ್ನೂ ಓದಿ: ಕೊನೆಯುಸಿರು ಇರುವವರೆಗೂ ರಾಜಕೀಯದಲ್ಲಿ ಇರ್ತೀನಿ: ಸಿದ್ದು - ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರಗೂ ಆಶೀರ್ವದಿಸಿ
2020ರಲ್ಲಿ ತಮಿಳುನಾಡು ರಾಜಕಾರಣಕ್ಕೆ ಪ್ರವೇಶಿಸಿದ ವಿದ್ಯಾರಾಣಿ ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಆನಂತರ ಬಿಜೆಪಿ ತೊರೆದ ಅವರು, ನಾಮ್ ತಮಿಲರ್ ಕಚ್ಚಿ (ಎನ್ಟಿಕೆ) ಪಕ್ಷ ಸೇರ್ಪಡೆಯಾಗಿದ್ದಾರೆ. ಈಗ ಡಿಕೆಶಿ ತಮ್ಮನ್ನು ಭೇಟಿಯಾದ ವಿದ್ಯಾರಾಣಿ ಅವರೊಂದಿಗೆ ಮಾತುಕತೆ ನಡೆಸಲು ಪ್ರತ್ಯೇಕವಾಗಿ ಅವಕಾಶ ನೀಡುವುದಾಗಿ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಶುದ್ಧ ಭಕ್ತಿ ಇದ್ದರೆ ಮಾತ್ರವೇ ದೇವರು ಒಲಿಯುತ್ತಾನೆ: ಧರ್ಮಗಳ ಬಗ್ಗೆ ಸಿಎಂ ಹೇಳಿದ್ದೇನು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ