'ವೆಂಟಿಲೇಟರ್‌ ಕೊರತೆ ಸಾವು ಹೆಚ್ಚಳಕ್ಕೆ ಕಾರಣವಲ್ಲ'

Published : Oct 06, 2020, 08:09 AM IST
'ವೆಂಟಿಲೇಟರ್‌ ಕೊರತೆ ಸಾವು ಹೆಚ್ಚಳಕ್ಕೆ ಕಾರಣವಲ್ಲ'

ಸಾರಾಂಶ

ಆಕ್ಸಿಜನ್‌ ಬೆಡ್‌ಗಳ ಕೊರತೆಯಿಂದಾಗಿ ಕೊರೋನಾ ಸಾವು ಹೆಚ್ಚಾಗುತ್ತಿದೆ . ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 33 ಸಾವಿರ ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದೆ  ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಮೈಸೂರು (ಅ.06):  ವೆಂಟಿಲೇಟರ್‌ ಇಲ್ಲದ ಕಾರಣ ಕೊರೋನಾ ಸಾವಿನ ಪ್ರಮಾಣ ಹೆಚ್ಚಳವಾಗಿಲ್ಲ, ಬದಲಾಗಿ ಆಕ್ಸಿಜನ್‌ ಬೆಡ್‌ಗಳ ಕೊರತೆಯಿಂದಾಗಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 33 ಸಾವಿರ ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸಿಜನ್‌ ಬೆಡ್‌ಗಳ ಕೊರತೆಯಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಆಕ್ಸಿಜನ್‌ ಬೆಡ್‌ಗಳ ಕೊರತೆ ನೀಗಿಸಲಾಗುತ್ತಿದೆ. ಮುಂದೆ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್‌ ಬೆಡ್‌ ಲಭ್ಯವಾಗಲಿದೆ ಎಂದರು.

ಬಿಎಸ್‌ವೈ ಸಂಪುಟದ ಮತ್ತೋರ್ವ ಸಚಿವರೊಬ್ಬರಿಗೆ ಕೊರೋನಾ..! .

ಇದೇ ವೇಳೆ 65 ವರ್ಷ ಮೇಲ್ಪಟ್ಟವರು ಸ್ವಯಂ ಕೊರೋನಾ ಟೆಸ್ವ್‌ ಮಾಡಿಸಿಕೊಳ್ಳುವ ಅಗತ್ಯವಿರುವುದರಿಂದ 65 ವರ್ಷ ಮೇಲ್ಪಟ್ಟವರ ಸರ್ವೇ ಮಾಡಿಸಲು ಸೂಚಿಸಲಾಗಿದೆ. ದಿನೇ ದಿನೇ ಕೊರೋನಾ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ದೇಶದಲ್ಲೇ ಕೊರೋನಾ ಹೆಚ್ಚಳವಾಗುತ್ತಿರುವ ರಾಜ್ಯಗಳಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!