
ಬೆಂಗಳೂರು(ಡಿ.14): ರಾಜ್ಯ ರಾಜಕಾರಣದ ಹಿರಿಯಣ್ಣ, ಅಜಾತಶತ್ರು, ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ಇಂದು (ಡಿಸೆಂಬರ್ 14) ಸಂಜೆ 6.45ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
ತಂದೆಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ, ತಿರುಪತಿ ಯಾತ್ರೆಗೆ ತೆರಳಿದ್ದ ಅವರ ಪುತ್ರ, ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್ಎಸ್ ಮಲ್ಲಿಕಾರ್ಜುನ್ ಅವರ ಕುಟುಂಬವು ತಕ್ಷಣವೇ ಪ್ರಯಾಣವನ್ನು ರದ್ದುಗೊಳಿಸಿ ವಾಪಸ್ ಬೆಂಗಳೂರಿಗೆ ಬರುತ್ತಿದೆ. ಸಚಿವ ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೇರಿ ಕುಟುಂಬದ ಸದಸ್ಯರು ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದರು ಅದಾಗಲೇ ಆಂಧ್ರ ಗಡಿಯನ್ನು ದಾಟಿ ಹೋಗಿದ್ದರು. ಆದರೆ ಈ ವೇಳೆ ತಂದೆಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರು ಪ್ರಯಾಣ ಮಧ್ಯದಲ್ಲಿಯೇ ವಾಪಸ್ ಆಗುತ್ತಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರಿಗೆ ಒಟ್ಟು 7 ಜನ ಮಕ್ಕಳಿದ್ದಾರೆ. ಪುತ್ರ ಎಸ್.ಎಸ್. ಗಣೇಶ್ ಅವರು ಅಸ್ಸಾಂ ದೇವಾಲಯಕ್ಕೆ ಹೋಗಿದ್ದು, ಅವರಿಗೆ ಕುಟುಂಬಸ್ಥರಿಂದ ಮಾಹಿತಿ ರವಾನಿಸಲಾಗಿದೆ. ಅಲ್ಲದೆ, ಇಬ್ಬರು ಹೆಣ್ಣುಮಕ್ಕಳು ವಿದೇಶದಲ್ಲಿದ್ದು, ಅವರಿಗೂ ಕುಟುಂಬದಿಂದ ನಿಧನದ ಬಗ್ಗೆ ಮಾಹಿತಿ ನೀಡಲಾಗಿದೆ. ಪ್ರಸ್ತುತ, ಆಸ್ಪತ್ರೆಯಲ್ಲಿ ಕೆಲ ಕುಟುಂಬಸ್ಥರು ಹಾಜರಿದ್ದು, ಮುಂದಿನ ಸಿದ್ಧತೆಗಳನ್ನು ಮಾಡುತ್ತಿದ್ದಾರೆ.
ದಾವಣಗೆರೆಗೆ ಪಾರ್ಥಿವ ಶರೀರ ರವಾನೆಗೆ ಸಿದ್ಧತೆ
ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಇಂದು ರಾತ್ರಿಯೇ ದಾವಣಗೆರೆಗೆ ರವಾನಿಸುವ ಸಾಧ್ಯತೆ ಇದೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಬೆಂಗಳೂರಿಗೆ ಬಂದು ತಲುಪಿದ ನಂತರ, ದಾವಣಗೆರೆಗೆ ಹೋಗಲು ಕುಟುಂಬಸ್ಥರು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಕುಟುಂಬಸ್ಥರು ಈ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ಪಾರ್ಥಿವ ಶರೀರವನ್ನು ದಾವಣಗೆರೆಗೆ ತೆಗೆದುಕೊಂಡು ಹೋಗಲು ಬೇಕಾದ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ