ಬೆಂಗಳೂರು: ಆರ್‌ಎಸ್‌ಎಸ್‌ ಜ್ಯೇಷ್ಠ ಪ್ರಚಾರಕ ಮದನ್‌ದಾಸ್‌ ದೇವಿ ಇನ್ನಿಲ್ಲ

Published : Jul 25, 2023, 07:29 AM IST
ಬೆಂಗಳೂರು: ಆರ್‌ಎಸ್‌ಎಸ್‌ ಜ್ಯೇಷ್ಠ ಪ್ರಚಾರಕ ಮದನ್‌ದಾಸ್‌ ದೇವಿ ಇನ್ನಿಲ್ಲ

ಸಾರಾಂಶ

ಬೆಂಗಳೂರಿನ ಸಂಘದ ಕಾರ್ಯಾಲಯ ‘ಕೇಶವ ಕೃಪಾ’ದಲ್ಲಿ ಸಂಘದ ಪ್ರಮುಖರು ಹಾಗೂ ಬಿಜೆಪಿ ಮುಖಂಡರು ಮದನ್‌ದಾಸ್‌ ದೇವಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಇಂದು ಬೆಳಗ್ಗೆ 11ಗಂಟೆಗೆ ಮಹಾರಾಷ್ಟ್ರದ ಪುಣೆಯ ವೈಕುಂಠ ಸ್ಮಶಾನದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಬೆಂಗಳೂರು(ಜು.25):  ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರಕಾರ್ಯವಾಹರಾಗಿ ಕಾರ್ಯನಿರ್ವಹಿಸಿದ್ದ, ಜ್ಯೇಷ್ಠ ಪ್ರಚಾರಕ ಹಾಗೂ ಈ ಹಿಂದೆ ಎಬಿವಿಪಿಯ ಸಂಘಟನಾ ಕಾರ್ಯದರ್ಶಿಗಳಾಗಿದ್ದ ಮದನ್‌ದಾಸ್‌ ದೇವಿ ಅವರು ಸೋಮವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾದರು.

ಅವರಿಗೆ 81 ವರ್ಷ ವಯಸ್ಸಾಗಿತ್ತು. ಮೂಲತಃ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಕರ್ಮಾಳ ಗ್ರಾಮದಲ್ಲಿ 1942ರ ಜುಲೈ 9ರಂದು ಜನಿಸಿದ್ದ ಅವರು ಎಂ.ಕಾಂ., ಎಲ್‌ಎಲ್‌ಬಿ ಪದವೀಧರರು. 1964ರಿಂದ ಎಬಿವಿಪಿಯಲ್ಲಿ ತೊಡಗಿಸಿಕೊಂಡ ಅವರು 1970ರಿಂದ 1992ರವರೆಗೆ ಎಬಿವಿಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ದೇಶಾದ್ಯಂತ ಸಂಘಟನೆ ಬೆಳೆಸಿದರು. 1991ರಿಂದ ಆರ್‌ಎಸ್‌ಎಸ್‌ನ ಅಖಿಲ ಭಾರತ ಪ್ರಚಾರಕ್‌ ಪ್ರಮುಖ್‌ ಆಗಿ, 1993ರಲ್ಲಿ ಸಂಘದ ಸಹ-ಸರಕಾರ್ಯವಾಹರಾಗಿ, 2009ರಲ್ಲಿ ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ವಯೋಸಹಜ ಕಾರಣದಿಂದ ವಿಶ್ರಾಂತಿ ಹಾಗೂ ಆರೈಕೆಯಲ್ಲಿದ್ದ ಮದನ್‌ದಾಸ್‌ ದೇವಿ ಅವರು ಸೋಮವಾರ ಮುಂಜಾನೆ ನಿಧರಾದರು.

ವಿಜಯಪುರ: ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಸಾವು

ಅಂತಿಮ ದರ್ಶನ:

ಬೆಂಗಳೂರಿನ ಸಂಘದ ಕಾರ್ಯಾಲಯ ‘ಕೇಶವ ಕೃಪಾ’ದಲ್ಲಿ ಸಂಘದ ಪ್ರಮುಖರು ಹಾಗೂ ಬಿಜೆಪಿ ಮುಖಂಡರು ಮದನ್‌ದಾಸ್‌ ದೇವಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮಂಗಳವಾರ ಬೆಳಗ್ಗೆ 11ಗಂಟೆಗೆ ಮಹಾರಾಷ್ಟ್ರದ ಪುಣೆಯ ವೈಕುಂಠ ಸ್ಮಶಾನದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಸಂತಾಪ:

ಮದನ್‌ದಾಸ್‌ ದೇವಿ ಅವರ ನಿಧನಕ್ಕೆ ಆರ್‌ಎಸ್‌ಎಸ್‌ ಸರಸಂಘಚಾಲಕ ಡಾ. ಮೋಹನ್‌ ಭಾಗವತ್‌, ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಮುಂತಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್