
ಬೆಂಗಳೂರು(ಜೂ.22): ಹಿರಿಯ ಲೇಖಕಿ ಕಮಲಾ ಹಂಪನಾ(89) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ(ಶುಕ್ರವಾರ) ರಾತ್ರಿ ನಿದ್ದೆಯಲ್ಲೇ ಹೃದಯಾಘಾತದಿಂದ ಕಮಲಾ ಹಂಪನಾ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಮಲಾ ಹಂಪನಾ ಅವರು ಬೆಂಗಳೂರಿನ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ವಿಮರ್ಶೆ, ಸಂಶೋಧನೆಗಳಲ್ಲಿ ಹೆಸರಾಗಿದ್ದ ಕಮಲಾ ಹಂಪನಾ, ಮೂಡುಬಿದಿರೆಯಲ್ಲಿ ನಡೆದಿದ್ದ 71ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿದ್ದರು.
ಪಂ.ರಾಜೀವ್ ತಾರಾನಾಥ್ ಅಸ್ತಂಗತ: ರಾಗದಿಂದ ಸರೋದ್ ವಾದನದೆಡೆಗೆ ಸಾಗಿದ ಹಾದಿಯೇ ಅಚ್ಚರಿ..!
ಕಮಲಾ ಹಂಪನಾ ಅವರ ಪತಿ ಹಿರಿಯ ಲೇಖಕ ಹಂ.ಪ. ನಾಗರಾಜಯ್ಯ. ರಾಜಾಜಿನಗರದ ಮನೆಯಲ್ಲೇ ಕಮಲಾ ಹಂಪನಾ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಮಲಾ ಹಂಪನಾ ಅವರ ದೇಹದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ರಾಮಯ್ಯ ಮೆಡಿಕಲ್ ಕಾಲೇಜಿಗೆ ಕಮಲಾ ದೇಹದಾನ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಹಿರಿಯ ಲೇಖಕಿ ಕಮಲಾ ಹಂಪನಾ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ