ಗಣೇಶೋತ್ಸವಕ್ಕೆ ಅನುಮತಿ ನೀಡಿ: ವಿಎಚ್‌ಪಿ ಮನವಿ

Kannadaprabha News   | Asianet News
Published : Aug 29, 2021, 07:39 AM IST
ಗಣೇಶೋತ್ಸವಕ್ಕೆ ಅನುಮತಿ ನೀಡಿ: ವಿಎಚ್‌ಪಿ ಮನವಿ

ಸಾರಾಂಶ

ಗಣೇಶ ಹಬ್ಬ 40-50 ಮಂದಿ ಸೇರಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮನವಿ 

  ಬೆಂಗಳೂರು (ಆ.29):  ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಗಣೇಶ ಹಬ್ಬದ ವೇಳೆ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುವುದರ ಜತೆ 40-50 ಮಂದಿ ಸೇರಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮನವಿ ಮಾಡಿದ್ದಾರೆ. 

ಮಸೀದಿ, ಚಚ್‌ರ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಅದರಂತೆ ಹಿಂದೂಗಳ ಹಬ್ಬಕ್ಕೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ?

ಆರೋಗ್ಯದ ದೃಷ್ಟಿಯಿಂದ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಕಳೆದ ಬಾರಿ ಸಾರ್ವಜನಿಕ ಪೆಂಡಾಲ್‌ಗಳಲ್ಲಿ ಗಣೇಶೋತ್ಸವ ಆಚರಣೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

 ಹೀಗಾಗಿ ಈ ಬಾರಿಯು ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ಸಂಪ್ರದಾಯದಂತೆ ಹಬ್ಬ ಆಚರಿಸಲು ಅವಕಾಶ ಮಾಡಿಕೊಡಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!