
ಬೆಂಗಳೂರು(ಮೇ.11): ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ನಾಚಿಕೆ ಹುಟ್ಟಿಸುತ್ತಿದೆ. ಈ ವಿಚಾರವಾಗಿ ನಿತ್ಯವೂ ಪರ ವಿರೋಧ ಮಾತನಾಡುವ ಬದಲು ತನಿಖೆ ನಡೆದು ಕೋರ್ಟ್ನಲ್ಲಿ ತೀರ್ಪು ಬರುವವರೆಗೂ ಎಲ್ಲರೂ ಬಾಯಿ ಮುಚ್ಚಿಕೊಂಡು ಇರುವುದು ಒಳ್ಳೆಯದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧ ಮುಂಭಾಗದ ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ ನಮ್ಮ ಹಾಗೂ ದೇಶದ ದುರ್ದೈವ. ಸುಸಂಸ್ಕೃತ ನಾಡು ಕರ್ನಾಟಕದಲ್ಲಿ ಈ ರೀತಿಯ ಪ್ರಕರಣ ನಡೆಯಬಾರದಿತ್ತು. ಇದನ್ನು ಇಡೀ ಜಗತ್ತು ನೋಡುತ್ತಿದೆ. ನಮಗೆ ನಾಚಿಕೆ ಆಗುತ್ತಿದೆ. ಮರ್ಯಾದೆ ಇರುವವರು ರಾಜಕಾರಣದಲ್ಲಿ ಇರಬಾರದು ಅನಿಸುತ್ತದೆ ಎಂದು ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್: 2ನೇ ರೇಪ್ ಕೇಸಿನಲ್ಲೂ ಜಡ್ಜ್ ಮುಂದೆ ಸಂತ್ರಸ್ತೆಯ ಹೇಳಿಕೆ
ಈ ಬಗ್ಗೆ ದಿನವೂ ಪರ ವಿರೋಧ ಮಾತನಾಡುವ ಬದಲು ಕಾನೂನಿದೆ, ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡು ಅದರ ವರದಿ ಮೇಲೆ ನ್ಯಾಯಾಲಯ ಏನು ತೀರ್ಪು ನೀಡುತ್ತದೆಯೋ ಕಾಯಬೇಕು. ಅಲ್ಲಿಯವರೆಗೆ ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ