
ಬೆಂಗಳೂರು, (ಫೆ.02): ಏಕಕಾಲಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರ ಹೆಸರಲ್ಲಿ ಸಾವಿರಾರು ಪತ್ರಗಳು ಬಂದಿದ್ದು, ಇಷ್ಟು ದೊಡ್ಡಮಟ್ಟದ ಟಪಾಲು ನೋಡಿ ವಿಧಾನಸಭೆ ಸಿಬ್ಬಂದಿ ಕಂಗಾಲಾಗಿದ್ದಾರೆ.
ಹೌದು..ಅದು ಒಂದೇ ವಿಚಾರವಾಗಿ ಒಂದಲ್ಲ ಎರಡಲ್ಲ ಬರೋಬ್ಬರಿ 15,000 ಸಾವಿರಕ್ಕೂ ಹೆಚ್ಚು ಪತ್ರಗಳು ಬಂದಿದ್ದು, ಸಿಬ್ಬಂದಿಗಳು ಹೌಹಾರಿದ್ದಾರೆ.
ಮುಂದೂಡಲಾಗಿದ್ದ FDA ಪರೀಕ್ಷೆಗೆ ಹೊಸ ದಿನಾಂಕ ಪ್ರಕಟ
ಸಿಎಂ ಯಡಿಯೂರಪ್ಪ, ಸಚಿವರಾದ ಡಾ.ಕೆ.ಸುಧಾಕರ್, ಭೈರತಿ ಬಸವರಾಜ್ ಅವರ ಹೆಸರಲ್ಲಿ ಒಂದೇ ಕವರ್, ಒಂದೇ ವಿಷಯ ಹೊಂದಿರುವ 15,000 ಪತ್ರಗಳು ಬಂದಿವೆ. ಪತ್ರಗಳನ್ನು ನೋಡಿ ಬೆಚ್ಚಿಬಿದ್ದ ಸಿಬ್ಬಂದಿಗಳು ಸಚಿವರಿಗೆ ಪತ್ರಗಳ ರಾಶಿ ತೆಗೆದುಕೊಂಡು ಹೋಗುವಂತೆ ಮನವಿ ಮಾಡಿದ್ದಾರೆ.
ಸಿಗರೇಟ್, ತಂಬಾಕು ಉತ್ಪನ್ನ ಮಾರಾಟ ಮಾಡುವ ಸ್ಥಳಗಳ ನಿಯಂತ್ರಣ ಕಾಯ್ದೆ ವಿರೋಧಿಸಿ ಬೆಂಗಳೂರಿನ ಅಂಗಡಿ ಮುಂಗಟ್ಟು ಮಾಲೀಕರು ಸಿಎಂ ಹಾಗು ಸಚಿವರಿಗೆ ಪತ್ರ ಬರೆದಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ