ವಿದ್ಯಾಗಮ ಎಫೆಕ್ಟ್: ಮತ್ತೆ ಆರು ಶಿಕ್ಕರಿಗೆ ಕೊರೋನಾ!

Published : Oct 12, 2020, 07:20 AM ISTUpdated : Oct 12, 2020, 09:14 AM IST
ವಿದ್ಯಾಗಮ ಎಫೆಕ್ಟ್: ಮತ್ತೆ ಆರು ಶಿಕ್ಕರಿಗೆ ಕೊರೋನಾ!

ಸಾರಾಂಶ

ನಿನ್ನೆ ಮತ್ತೆ ಆರು ಶಿಕ್ಷಕರಿಗೆ ಕೊರೋನಾ| ವಿದ್ಯಾ​ಗಮ ಕಾರ‍್ಯಕ್ರಮ ವೇಳೆ ತಗು​ಲಿದ ಸೋಂಕು

ಯಾದಗಿರಿ/ಕಲಬುರಗಿ(ಅ.12): ವಿದ್ಯಾಗಮ ಕಾರ‍್ಯಕ್ರಮದಿಂದಾಗಿ ಕಲಬುರಗಿಯಲ್ಲಿ ನಾಲ್ವರು ಹಾಗೂ ಯಾದಗಿರಿಯಲ್ಲಿ ಇಬ್ಬರು ಶಿಕ್ಷಕರಿಗೆ ಕೊರೋನಾ ಸೋಂಕಿದ್ದು, ಇದರಿಂದಾಗಿ ವಿದ್ಯಾಗಮದಡಿ ಈ ಶಿಕ್ಷಕರಿಂದ ಪಾಠ ಕೇಳಿದ ಮಕ್ಕಳಲ್ಲಿ ಆತಂಕ ಶುರುವಾಗಿದೆ.

ಕಲಬುರಗಿಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ವರು ಶಿಕ್ಷಕರು ಸೋಂಕಿತರಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಮಾಶಾಳ ವಠಾರ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಈಗ ಮತ್ತೆ ನಾಲ್ವರು ಶಿಕ್ಷಕರಿಗೆ ಕೊರೋನಾ ತಗುಲಿರುವುದರಿಂದ ಪೋಷಕರಲ್ಲಿ ಆತಂಕ ಮನೆಮಾಡಿದೆ.

"

ಇನ್ನು ಯಾದಗಿರಿಯ ಸುರಪುರ ತಾಲೂಕಿನ ರತ್ತಾಳ್‌ ಗ್ರಾಮದಲ್ಲಿ ಶಿಕ್ಷಕ ಹಾಗೂ ಶಿಕ್ಷಕಿಗೆ ಕೊರೋನಾ ದೃಢಪಟ್ಟಿದ್ದು, ಹೋಂ ಕ್ವಾರಂಟೈನ್‌ ಆಗಿದ್ದು, ಇವರು ಪಾಠ ಮಾಡಿದ ಮಕ್ಕಳ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಸುರಪುರದ ಒಬ್ಬರು ಹಾಗೂ ಶಹಾಪೂರದಲ್ಲಿ ಇಬ್ಬರು ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ.

ವಿದ್ಯಾಗಮ ಯೋಜನೆ ಪ್ರಾರಂಭವಾದ ಬಳಿಕ ರಾಜ್ಯದ ವಿವಿಧೆಡೆ ಸುಮಾರು 47ಕ್ಕೂ ಹೆಚ್ಚು ಮಂದಿ ಶಿಕ್ಷಕರು ಮಹಾಮಾರಿ ಕೊರೋನಾಗೆ ಬಲಿಯಾಗಿದ್ದು, ನೂರಾರು ಮಕ್ಕಳು ಕೊರೋನಾ ಸೋಂಕಿತರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌