ತಪ್ಪಿತು ಮತ್ತೊಂದು ರೈಲು ದುರಂತ ತಪ್ಪಿಸಿದ ಯುವಕರು!

Published : Jan 13, 2019, 11:57 AM IST
ತಪ್ಪಿತು ಮತ್ತೊಂದು ರೈಲು ದುರಂತ ತಪ್ಪಿಸಿದ ಯುವಕರು!

ಸಾರಾಂಶ

 ಮಿರಜ್‌-ಹುಬ್ಬಳ್ಳಿ ರೈಲು ದುರಂತ ತಪ್ಪಿಸಿದ ಚಾಲಕ| ಬೆಳಗಾವಿ- ಖಾನಾಪುರ ರೈಲು ಹಳಿ ಮೇಲೆ ಹಳೆ ಮರ ಪಲ್ಟಿ| ದೂರದಿಂದಲೇ ಮರ ಬಿದ್ದಿರುವುದನ್ನು ನೋಡಿ ರೈಲು ನಿಲ್ಲಿಸಿದ ಚಾಲಕ

ಖಾನಾಪುರ[ಜ.13]: ಇತ್ತೀಚೆಗೆ ಕುಮಟಾ ಹಾಗೂ ಧಾರವಾಡದಲ್ಲಿ 2 ರೈಲು ದುರಂತಗಳು ಸಮಯಪ್ರಜ್ಞೆಯಿಂದ ಸ್ವಲ್ಪದರಲ್ಲೇ ತಪ್ಪಿದ್ದವು. ಈಗ ಇಂಥದ್ದೇ ಪ್ರಸಂಗ ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ನಡೆದಿದೆ.

ರೈಲು ಹಳಿಯ ಮೇಲೆ ಹಳೆ ಮರ ಬಿದ್ದಿರುವುದನ್ನು ದೂರದಿಂದ ಗಮನಿಸಿದ ರೈಲು ಚಾಲಕ ರೈಲಿನ ವೇಗವನ್ನು ಕಡಿಮೆಗೊಳಿಸಿ ರೈಲನ್ನು ನಿಲ್ಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾನೆ. ಮಾತ್ರವಲ್ಲ, ಸಂಭವಿಸಬಹುದಾಗಿದ್ದ ಭೀಕರ ರೈಲು ದುರಂತವನ್ನು ತಪ್ಪಿಸಿದ ಘಟನೆ ಶುಕ್ರವಾರ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಬಳಿ ಬೆಳಗಾವಿ ರಸ್ತೆಯ ರೈಲ್ವೆ ಸೇತುವೆ ಬಳಿ ಸಂಭವಿಸಿದೆ.

ಬೆಳಗಾವಿಯಿಂದ ಖಾನಾಪುರ ಪಟ್ಟಣದ ರೈಲು ನಿಲ್ದಾಣದತ್ತ ಮಿರಜ್‌- ಹುಬ್ಬಳ್ಳಿ ಪ್ಯಾಸೆಂಜರ್‌ ರೈಲು ಪ್ರಯಾಣಿಸುತ್ತಿತ್ತು. ಈ ಸಂದರ್ಭದಲ್ಲಿ ರೈಲ್ವೆ ಹಳಿಗಳ ಮೇಲೆ ಅಡ್ಡಲಾಗಿ ಹಳೆಯ ಮರವೊಂದು ಬಿದ್ದಿತ್ತು. ರೈಲು ಚಾಲಕ ದೂರದಿಂದಲೇ ಗಮನಿಸಿ ತುರ್ತು ಬ್ರೇಕ್‌ ಹಾಕಿ ರೈಲಿನ ವೇಗ ಕಡಿಮೆಗೊಳಿಸಿ, ರೈಲು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾನೆ. ನಂತರ ವಿಷಯವನ್ನು ಖಾನಾಪುರ ರೈಲು ನಿಲ್ದಾಣಕ್ಕೆ ಮುಟ್ಟಿಸಿದ್ದಾರೆ. ಸುದ್ದಿ ತಿಳಿದ ರೈಲ್ವೆ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಮರಬಿದ್ದ ಸ್ಥಳಕ್ಕೆ ತೆರಳಿ ಮರವನ್ನು ಹಳಿಗಳಿಂದ ತೆರವುಗೊಳಿಸಿ ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ರೈಲಿನಲ್ಲಿ ನೂರಾರು ಜನ ಪ್ರಯಾಣಿಸುತ್ತಿದ್ದರು.

ಈ ಘಟನೆಯಿಂದಾಗಿ ಬೆಳಗಾವಿ- ಖಾನಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎಲ್ಲ ರೈಲುಗಳ ಸಂಚಾರದಲ್ಲಿ ಸುಮಾರು ಅರ್ಧ ಗಂಟೆ ವಿಳಂಬವಾಗಿದ್ದು, ಘಟನೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ರೈಲ್ವೆ ಇಲಾಖೆಯ ಮೂಲಗಳು ಸ್ಪಷ್ಟಪಡಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!
ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!