
ವಿಜಯನಗರ, (ಜು. 24): ಮಳೆಯ ಅಬ್ಬರಕ್ಕೆ ಹಳ್ಳ-ಕೊಳ್ಳ, ಕೆರೆ-ಕಟ್ಟೆ ಹಾಗೂ ನದಿಗಳು ಹುಕ್ಕಿಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಮಲೆನಾಡು, ಕರಾವಳಿ, ಕೊಡಗು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಸಂಪೂರ್ಣ ಜಲಾವೃತವಾಗಿವೆ.
ಇನ್ನು ರಾಯಚೂರು, ವಿಜಯನಗರ, ಕೊಪ್ಪಳ ಹಾಗೂ ಬಳ್ಳಾರಿ ಜನರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದ್ದು, ಇಂದು (ಜು.24) ಸಂಜೆ ಗಂಟೆ ಮಾಹಿತಿ ಪ್ರಕಾರ 124000 ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ.
ಇದರಿಂದ 2600 ಕ್ಯೂಸೆಕ್ಸ್ ನೀರು ನದಿಗಳಿಗೆ ಬಿಡಲಾಗಿದ್ದು, ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ತುಂಗಭದ್ರಾ ಆಡಳಿತ ಮಂಡಳಿ ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ಚಿಕ್ಕಮಗಳೂರು, ಶಿವಮೊಗ್ಗ, ಹೊನ್ನಾಳಿ, ಭದ್ರಾವತಿ, ದಾವಣಗೆರೆ ಹೀಗೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದೆ.
ಈಗಾಗಲೇ ತುಂಗಾಭದ್ರೆಯಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಬಿಡಲಾಗಿದ್ದು, ಇದೀಗ ಒಳಹರಿವು ಹೆಚ್ಚಳವಾಗಿದ್ದರಿಂದ ನದಿಗೆ ಬಿಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ