ವಿಜಯಪುರ ಬಸವ ಜಿಲ್ಲೆ ಮಾಡುವ ವಿಚಾರದಲ್ಲಿ ಲಿಂಗಾಯತ ಸಮುದಾಯ ಪರವೂ ಇಲ್ಲ, ವಿರೋಧವೂ ಇಲ್ಲ: ಡಾ ಎಸ್‌ಬಿ ಜಾಮದಾರ

Published : Oct 29, 2023, 02:02 PM IST
ವಿಜಯಪುರ ಬಸವ ಜಿಲ್ಲೆ ಮಾಡುವ ವಿಚಾರದಲ್ಲಿ ಲಿಂಗಾಯತ ಸಮುದಾಯ ಪರವೂ ಇಲ್ಲ, ವಿರೋಧವೂ ಇಲ್ಲ:  ಡಾ ಎಸ್‌ಬಿ ಜಾಮದಾರ

ಸಾರಾಂಶ

ವಿಜಯಪುರ ಜಿಲ್ಲೆಯನ್ನು ಬಸವೇಶ್ವರ ಜಿಲ್ಲೆಯನ್ನಾಗಿ, ಕರ್ನಾಟಕವನ್ನು ಬಸವನಾಡು ಎಂದು ಮಾಡುವ ವಿಚಾರವಾಗಿ ಜಾಗತಿಕ ಲಿಂಗಾಯತ ಸಮುದಾಯವು ಇದರ ಪರವಾಗಿಯೂ ಇಲ್ಲ, ವಿರುದ್ಧವಾಗಿಯೂ ಇಲ್ಲ ಎಂದು ಜಾಗತಿಕ ಲಿಂಗಾಯತ ಸಮುದಾಯದ ಪ್ರಧಾನ ಕಾರ್ಯದರ್ಶಿ ಡಾ.ಎಸ್‌ಬಿ ಜಾಮದಾರ ಹೇಳಿದರು.

ಬೆಳಗಾವಿ (ಅ.29): ವಿಜಯಪುರ ಜಿಲ್ಲೆಯನ್ನು ಬಸವೇಶ್ವರ ಜಿಲ್ಲೆಯನ್ನಾಗಿ, ಕರ್ನಾಟಕವನ್ನು ಬಸವನಾಡು ಎಂದು ಮಾಡುವ ವಿಚಾರವಾಗಿ ಜಾಗತಿಕ ಲಿಂಗಾಯತ ಸಮುದಾಯವು ಇದರ ಪರವಾಗಿಯೂ ಇಲ್ಲ, ವಿರುದ್ಧವಾಗಿಯೂ ಇಲ್ಲ ಎಂದು ಜಾಗತಿಕ ಲಿಂಗಾಯತ ಸಮುದಾಯದ ಪ್ರಧಾನ ಕಾರ್ಯದರ್ಶಿ ಡಾ.ಎಸ್‌ಬಿ ಜಾಮದಾರ ಹೇಳಿದರು.

ಇಂದು ವಿಜಯಪುರ ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಇತ್ತೀಚಿನ ಪ್ರಸ್ತಾವನೆಯನ್ನು ನಾನು ಒಂದು ವಾರದಿಂದ ಮಾಧ್ಯಮಗಳಲ್ಲಿ ಗಮನಿಸುತ್ತಿರುವೆ. ಸಚಿವ ಎಂಬಿ ಪಾಟೀಲ್ ಅವರ ಪ್ರಸ್ತಾವನೆಗೆ ಅದೇ ಜಿಲ್ಲೆಯ ಮತ್ತೋರ್ವ ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ.  ವಿಜಯಪುರವನ್ನು ಬಸವನಾಡು ಜಿಲ್ಲೆ ಮಾಡುವ ಅಗತ್ಯವಿಲ್ಲ. ಅಭಿವೃದ್ಧಿ ಪಡಿಸುವುದರ ಕಡೆ ಗಮನಹರಿಸಿ ಎಂದಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಮೊದಲು ಒಂದು ನಿರ್ಣಯಕ್ಕೆ ಬರಲಿ. ಈ ವಿಚಾರವಾಗಿ ಮಂತ್ರಿಗಳಲ್ಲೇ ದ್ವಂದ್ವ ನಿಲುವಿದೆ, ಡಿಸಿ ನಿಲುವು ಕೂಡ ಬೇರೆಯೇ ಇದೆ. ಸರ್ಕಾರ ಕೂಡ ಈ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲವೆಂದು ಕಾಣುತ್ತದೆ ಎಂದರು.

ಕರ್ನಾಟಕ 'ಬಸವನಾಡು' ಅಂತಾದ್ರೆ ಬಸವ ವಿಚಾರ ಜಗತ್ತಿಗೆ ಇನ್ನಷ್ಟು ಪ್ರಚಾರ : ಬಸವ ಜಯಮೃತ್ಯುಂಜಯ ಸ್ವಾಮೀಜಿ

ನಾನು ಈ ಹಿಂದೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದೆ. ಆಗ 17 ಜಿಲ್ಲೆ, ಪಟ್ಟಣಗಳ ಹೆಸರನ್ನು ಬದಲಿಸಲು ಕೇಂದ್ರಕ್ಕೆ ಶಿಫಾರಸು ಮಾಡಿದ್ದೆ. ಬೆಳಗಾಂನ್ನು ಬೆಳಗಾವಿ, ಬಿಜಾಪುರವನ್ನು ವಿಜಯಪುರ ಮಾಡಲು ಶಿಫಾರಸು ಮಾಡಿದ್ದೆ. ಐದಾರೂ ವರ್ಷಗಳ ಬಳಿಕ ಕೇಂದ್ರ ಸರ್ಕಾರ ಹೆಸರು ಬದಲಿಸುವ ತೀರ್ಮಾನ ತೆಗೆದುಕೊಂಡಿತು. ಅಂತಿಮವಾಗಿ ಈ ಬಗ್ಗೆ ನಿರ್ಣಯ ಆಗಬೇಕಿರುವುದು ರಾಜ್ಯ ಸರ್ಕಾರದಲ್ಲಿ. ರಾಜ್ಯಸರ್ಕಾರವೇ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಬೇಕು. ಸದ್ಯ ಸಚಿವರ ಹೇಳಿಕೆ ಬಗ್ಗೆ ಗೊಂದಲವಿದೆ. ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ ಆಗುತ್ತೋ? ಇಲ್ವೋ? ಎಂಬ ಬಗ್ಗೆ ನನಗೆ ನಿಖರವಾಗಿ ಮಾಹಿತಿ ಇಲ್ಲ. ಒಂದು ವೇಳೆ ಬಸವ ಜಿಲ್ಲೆಯಾಗಿ ಮಾಡಿದರೂ ಸರ್ಕಾರದ ನಿರ್ಣಯಕ್ಕೆ ನಾವು ಬದ್ಧರಾಗಿರುತ್ತೇವೆ. ಯಾವುದೇ ಕಾರಣಕ್ಕೂ ವಿರೋಧ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಹೆಸರು ಬದಲಾವಣೆ ಬದಲು ಬಸವಜನ್ಮಭೂಮಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ : ಸಚಿವ ಶಿವಾನಂದ ಪಾಟೀಲ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಆಲೂಗಡ್ಡೆಗೆ ಮೊಳಕೆ ಬಂದರೆ ತಿನ್ನಬಹುದಾ? ತಜ್ಞರ ಎಚ್ಚರಿಕೆ ಏನು, ಯಾವುದು- ಯಾರಿಗೆ ಅಪಾಯ?