
ವಿಜಯಪುರ, (ನ. 4): ಕಳೆದ ಎರಡು ತಿಂಗಳಲ್ಲಿ 13 ಬಾರಿ ಭೂಮಿ ಕಂಪಿಸಿದ್ದರೂ, ಇಂದು 7.45ರ ಸುಮಾರಿಗೆ ಮತ್ತೊಮ್ಮೆ ಭಾರೀ ಸ್ಫೋಟದ ಸದ್ದಿನೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ವಿಜಯಪುರ ಸೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆತಂಕ ಮೂಡಿಸಿದೆ.
ಹೌದು, ರಿಕ್ಟರ್ ಸ್ಕೇಲ್ನಲ್ಲಿ 3.1 ತೀವ್ರತೆಯ ಈ ಭೂಕಂಪನವು ವಿಜಯಪುರ ನಗರ ಹೊರತಾಗಿ ತಿಕೋಟ, ಕಳ್ಳಕವಟಗಿ, ತೊರವಿ, ಶಿವಗಿರಿ ಮತ್ತು ಹೊನ್ನೂಟಗಿ ಸೇರಿದಂತೆ ವಿಜಯಪುರ ಮತ್ತು ತಿಕೋಟ ತಾಲೂಕುಗಳಲ್ಲಿ ತೀವ್ರವಾಗಿ ಅನುಭವಕ್ಕೆ ಬಂದಿದೆ. ಭೂಮಿ ನಡುಗುತ್ತಿದ್ದಂತೆ ಮನೆಯಿಂದ ಭಯಭೀತರಾಗಿ ಜನರು ಹೊರಗೆ ಓಡಿಬಂದಿರುವದು ಸಿಸಿಟಿವಿಗಳಲ್ಲಿ ದಾಖಲಾಗಿದೆ.
ನಗರದ ವಿವಿಧ ಸ್ಥಳಗಳ ಸಿಸಿಟಿವಿ ಕ್ಯಾಮರಾಗಳಲ್ಲಿ ಭೂಮಿ ನಡುಗುವುದು ಸೆರೆಯಾಗಿದೆ. ಜೊತೆಗೆ, 'Earthquake Network' ಮತ್ತು 'QuakeFeed ಭೂಕಂಪನ ಆಪ್ಗಳಲ್ಲಿ 3.1 ರಿಕ್ಟರ್ ತೀವ್ರತೆಯ ದಾಖಲೆ ದಾಖಲಾಗಿದ್ದು, ತಕ್ಷಣ ತುರ್ತು ಸಂದೇಶಗಳು ಬಳಕೆದಾರರಿಗೆ ಬಂದಿವೆ.
ಅಕ್ಟೋಬರ್ನಿಂದಲೇ ವಿಜಯಪುರದಲ್ಲಿ ಪದೇಪದೆ ಭೂಕಂಪ ಸಂಭವಿಸುತ್ತಿದೆ. ಈ ಪ್ರದೇಶದಲ್ಲಿ ಭೂಗರ್ಭಕ್ಕೆ ಸಂಬಂಧಿಸಿದ ಚಟುವಟಿಕೆಗಳು ಹೆಚ್ಚುತ್ತಿವೆ. ಕಳೆದ ಎರಡು ತಿಂಗಳಲ್ಲಿ 13 ಬಾರಿ ಭೂಮಿ ಕಂಪಿಸಿದೆ. ಈಗಿನ ಭೂಕಂಪನವು ಇನ್ನಷ್ಟು ತೀವ್ರವಾಗಬಹುದು ಎಂಬ ಆತಂಕವು ಜನರಲ್ಲಿ ಹರಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ